ಗದಗ ನಗರದ ಜನನಿಬಿಡ ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಪಟಾಕಿಗಳನ್ನು ವಶಪಡಿಸಿಕೊಳ್ಳಲಾಗಿದೆ.
ಗದಗ ನಗರದ ದಾಸರ ಓಣಿಯ ಜನನಿಬಿಡ ಪ್ರದೇಶದಲ್ಲಿ ಪಟಾಕಿಗಳನ್ನು ಜಪ್ತಿ ಮಾಡಲಾಗಿದೆ. ರಾಮಚಂದ್ರ ಸಿದ್ದಲಿಂಗ ಅವರ ಮನೆಯಲ್ಲಿ ಅಕ್ರಮವಾಗಿ ಪಟಾಕಿಗಳನ್ನು ಇಡಲಾಗಿತ್ತು. ಗದಗ ಶಹರ ಠಾಣೆ ಸಿಪಿಐ ಡಿ.ಬಿ. ಪಾಟೀಲ್ ಅವರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ.
ವರದಿಯೊಂದರ ಪ್ರಕಾರ ಪೊಲೀಸರು ಶೋಧ ನಡೆಸಿ ಲಕ್ಷಾಂತರ ರೂಪಾಯಿ ಮೌಲ್ಯದ ಪಟಾಕಿಗಳನ್ನು ವಶಪಡಿಸಿಕೊಂಡಿದ್ದಾರೆ. ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.