ಖಾನಾಪೂರ ತಾಲೂಕಿನ ಮಡಿವಾಳ ಗ್ರಾಮದಲ್ಲಿ ಸುರಿದ ಭಾರಿ ಮಳೆಯಿಂದ ಅಪಾರ ಪ್ರಮಾಣದಲ್ಲಿ ಹಾನಿ ಸಂಭವಿಸಿದ್ದು, ಹಾನಿ ಪೀಡಿತ ಪ್ರದೇಶಗಳಿಗೆ ಶಾಸಕ ವಿಠ್ಠಲ ಹಲಗೇಕರ ಭೇಟಿ ನೀಡಿ ಪರಿಶೀಲಿಸಿದರು.
ಖಾನಾಪೂರ ತಾಲೂಕಿನ ಮಡಿವಾಳ ಗ್ರಾಮಕ್ಕೆ ಭೇಟಿ ನೀಡಿದ ಶಾಸಕ ವಿಠ್ಠಲ ಹಲಗೇಕರ ಅವರು ಮಳೆಯ ಅಬ್ಬರಕ್ಕೆ ಹಾಳಾದ ರಸ್ತೆ ಮತ್ತು ಸೇತುವೆ ಪರಿಶೀಲನೆ ನಡೆಸಿದ್ದರು ,
ಗ್ರಾಮದ ಹಲವು ಬಡಾವಣೆಗಳಿಗೆ ನೀರು ನುಗ್ಗಿ ಮನೆಗಳಿಗೆ ಹಾನಿಯಾಗಿರುವುದನ್ನು ಪರಿಶೀಲನೆ ನಡೆಸಿ , ಬೆಳೆ ಮತ್ತು ಮನೆ ಹಾನಿ ವಿಷಯದಲ್ಲಿ ನಿರ್ಲಕ್ಷ್ಯ ಮಾಡದೇ ಸಮೀಕ್ಷೆ ನಡೆಸಿ, ಸಂತ್ರಸ್ತರಿಗೆ ಅನುಕೂಲ ಮಾಡಿಕೊಡಲಾಗುವುದು ಎಂದು ಗ್ರಾಮಸ್ಥರಿಗೆ ತಿಳಿಸಿದರು .