Banglore

ಗೃಹ ಲಕ್ಷ್ಮೀ ನಿತ್ಯ…ಸತ್ಯ …ನಿರಂತರ… ಯೋಜನೆಯನ್ನು ಎಂದಿಗೂ ನಿಲ್ಲಿಸಲ್ಲ ; ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ

Share

ಸರ್ಕಾರದ ಮಹತ್ವಾಕಾಂಕ್ಷಿ ಗೃಹಲಕ್ಷ್ಮಿ ಯೋಜನೆ ಎಂದಿಗೂ ಸ್ಥಗಿವಾಗುವುದಿಲ್ಲ. 2 ತಿಂಗಳ ಬಾಕಿ ಹಣವನ್ನು ಶೀಘ್ರ ಒಂದೇ ಬಾರಿ ಖಾತೆ ಜಮೆ ಮಾಡಲಾಗುವುದು. ಇದು ಸತ್ಯ, ಇದು ನಿತ್ಯವೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು. ಸೋಮವಾರದಂದು ಅವರು ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಈಗಾಗಲೇ ಹಲವು ಬಾರಿ ಗೃಹಲಕ್ಷ್ಮಿ ಬಗ್ಗೆ ಸ್ಪಷ್ಟನೆ ನೀಡಿದ್ದೇನೆ. ಮತ್ತೊಮ್ಮೆ ನೀಡುತ್ತೇನೆ ಗೃಹಲಕ್ಷ್ಮೀ ಹಣ ನಿತ್ಯ, ಸತ್ಯ, ನಿರಂತರ. ಕಳೆರಡು ತಿಂಗಳಿಂದ ಜಮೆಯಾಗದ ಹಣ ಒಂದೇ ಬಾರಿ ಅಕೌಂಟ್‌ಗೆ ಪಾವತಿಯಾಗಲಿದೆ. ಲಿಂಗತ್ವ ಅಲ್ಪಸಂಖ್ಯಾತರಿಗೆ ಮೂರು ತಿಂಗಳ ಹಿಂದಷ್ಟೆ ಅರ್ಜಿ ಹಾಕಲು ಅವಕಾಶ ನೀಡಲಾಗಿತ್ತು. ಅವರಿಗೂ ಕೂಡ ಅಷ್ಟು ಬಾಕಿ ಹಣ ಒಟ್ಟಿಗೆ ಜಮಾ ಎಂದರು.

ಇನ್ನು ಚಿತ್ರರಂಗದ ಕಲಾವಿದೆಯರ ಜೊತೆ ಮಹಿಳಾ ಆಯೋಗ ಸಭೆ ಆಯೋಜಿಸಿರುವ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು, ಈ ಕುರಿತು ಸಮಿತಿ ರಚನೆ ಆಗಬೇಕು. ಮುಖ್ಯಮಂತ್ರಿಗಳು ಈಗಾಗಲೇ ಮಾಹಿತಿ ಪಡೆದಿದ್ದಾರೆ. ಚಿತ್ರರಂಗ ಅಷ್ಟೇ ಅಲ್ಲ, ಯಾವ ಕ್ಷೇತ್ರದಲ್ಲೂ ಮಹಿಳೆಯರಿಗೆ ದೌರ್ಜನ್ಯ ಆಗಬಾರದು ಎಂದರು.  ಒಂದೂವರೆ ವರ್ಷದ ಹಿಂದಿ‌ನಿಂದಲೇ ಅಂಗನವಾಡಿ ಕೇಂದ್ರಗಳಲ್ಲಿ ಆರ್ಗ್ಯಾನಿಕ್ ಬೆಲ್ಲ ನೀಡಲಾಗುತ್ತಿತ್ತು. ಆದರೇ ಪಾಲಕರು ನಿರಾಕರಿಸಿದ ಕಾರಣ ಆರ್ಗ್ಯಾನಿಕ್ ಬೆಲ್ಲದ ಬದಲಿಗೆ ಗಟ್ಟಿ ಬೆಲ್ಲವನ್ನೇ ನೀಡಲು ನಿರ್ಧರಿಸಲಾಗಿದೆಅಕ್ಟೋಬರ್ 1 ರಿಂದ ಗಟ್ಟಿ ಬೆಲ್ಲ ನೀಡುವುದಾಗಿ ಸ್ಪಷ್ಟಪಡಿಸಿದರು.

ಇನ್ನು ಕರ್ನಾಟಕದಲ್ಲಿರುವ 139 ಎಂಎಸ್‌ಪಿಟಿಸಿಗಳನ್ನು ಉನ್ನತೀಕರಿಸಲು ಮಾಡಲಾಗುತ್ತಿದ್ದು, ಉತ್ತಮ ಲ್ಯಾಬ್ ಸೌಲಭ್ಯಗಳನ್ನು ಮಾಡಲು ಸಿದ್ಧತೆ ಮಾಡಿಕೊಂಡಿದ್ದೇವೆ. ಸುಪ್ರೀಕೋರ್ಟ್ ನಿರ್ದೇಶನದ ಮೇರೆಗೆ ಚೆನ್ನೈ ಮೂಲದ ಸಂಸ್ಥೆಯಿಂದ ಅಂಗನವಾಡಿ ಕೇಂದ್ರಗಳಿಗೆ ಆಹಾರ ಪೂರೈಕೆಯಾಗುತ್ತಿದೆ. 15 ವರ್ಷಗಳಿಂದಲೂ ಇದು ನಡೆದುಕೊಂಡು ಬರುತ್ತಿದೆ. ಇನ್ಮುಂದೆ ಜಿಲ್ಲಾ ಮಟ್ಟದಲ್ಲೇ ಪೌಡರ್ ತಯಾರಿಸಲು ಸಿದ್ಧತೆ ಮಾಡಿಕೊಂಡಿದ್ದು, ಇದಕ್ಕೆ 200 ಕೋಟಿ ವೆಚ್ಚ ಮಾಡಲಾಗುತ್ತದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಹೇಳಿದರು.

Tags:

error: Content is protected !!