Gokak

ಭಜನೆ ಮುಗಿಸಿ ದೇವಸ್ಥಾನದೆದುರು ಮಲಗಿದ ವ್ಯಕ್ತಿಯನ್ನು ಕೊಚ್ಚಿ ಕೊಲೆಗೈದ ದುರುಳ !!!

Share

 

ರಾತ್ರಿ ಹೊತ್ತು ದೇವಸ್ಥಾನದಲ್ಲಿ ಪೂಜೆ ಮೂಗಿಸಿ ಮಲಗಿದ್ದ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ಗೋಕಾಕ ತಾಲ್ಲೂಕಿನ ಮಮದಾಪೂರ ಗ್ರಾಮದಲ್ಲಿ ನಡೆದಿದೆ.

ಬೆಳಗಾವಿ ಜಿಲ್ಲೆಯಲ್ಲಿ ಗೋಕಾಕ ತಾಲೂಕಿನಲ್ಲಿ ರಾತ್ರಿಹೊತ್ತು ಮಂದಿರದಲ್ಲಿ ನಡೆದ ಭಜನೆ ಕಾರ್ಯಕ್ರಮ ಮುಗಿಸಿ,ಗುಡಿಯ ಕಟ್ಟೆಯ ಮೇಲೆ ಮಲಗಿದ್ದ ವ್ಯಕ್ತಿಯೊಬ್ಬನನ್ನು ಕಬ್ಬು ಕಡಿಯುವ ಕೋಯ್ತಾದಿಂದ ಕೊಚ್ವಿ ಕೊಲೆ ಮಾಡಿದ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲ್ಲೂಕಿನ ಮಮದಾಪೂರ ಗ್ರಾಮದಲ್ಲಿ ನಡೆದಿದೆ.

ಮಮದಾಪೂರ ಗ್ರಾಮದ ಬೀರ ಸಿದ್ದೇಶ್ವರ ಗುಡಿಯಲ್ಲಿ ಭಜನೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಭಜನೆ ಮುಗಿದ ಬಳಿಕ ಮಡ್ಡೆಪ್ಪ ಯಲ್ಲಪ್ಪ ಬಾನಸಿ (47) ದೇವಸ್ಥಾನದ ಕಟ್ಟೆಯ ಮೇಲೆ ಮಲಗಿದ್ದ, ಈ ಸಂದರ್ಭದಲ್ಲಿ ಬಂದ ಬೀರಪ್ಪ ಸಿದ್ದಪ್ಪ ಸೋನದೋಳಿ ಕೋಯ್ತಾದಿಂದ ಕುತ್ತಿಗೆಯ ಮೇಲೆ ಹಲ್ಲೆ ನಡೆಸಿದ್ದಾನೆ. ಇದರಿಂದ ಮಡ್ಡೆಪ್ಪ ತೀವ್ರ ಗಾಯಗೊಂಡಿದ್ದಾನೆ. ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಫಲಕಾರಿಯಾಗದೇ ಮಡ್ಡೆಪ್ಪ ಮೃತಪಟ್ಟಿದ್ದಾನೆ. ಗದ್ದೆಯ ಗಡಿ ವಿಷಯಕ್ಕೆ ಸಂಬಂಧಿಸಿದಂತೆ ಈ ಇಬ್ಬರಲ್ಲೂ ಕಲಹ ನಡೆದಿತ್ತು ಎಂಬ ಮಾಹಿತಿ ಬಲ್ಲಮೂಲಗಳಿಂದ ದೊರೆತಿದೆ. ಗೋಕಾಕ್ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

error: Content is protected !!