Savadatti

ಸವದತ್ತಿ ಯಲ್ಲಮ್ಮನ ಹುಂಡಿಯಲ್ಲಿ ₹1,48,95,404 ಕಾಣಿಕೆ ಸಂಗ್ರಹ…

Share

ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಉಗರಗೋಳ ಸಮೀಪದ ಯಲ್ಲಮ್ಮನಗುಡ್ಡದಲ್ಲಿ ಗುರುವಾರ ಹುಂಡಿ ಎಣಿಕೆ ಕಾರ್ಯ ಪೂರ್ಣಗೊಂಡಿದ್ದು, 1 ಕೋಟಿ 48 ಲಕ್ಷ 95 ಸಾವಿರದ 404 ರೂಪಾಯಿ ಕಾಣಿಕೆ ಸಂಗ್ರಹವಾಗಿದೆ.

ಮೇ 25ರಿಂದ ಜುಲೈ 20ರವರೆಗೆ (55 ದಿನಗಳಲ್ಲಿ) ಯಲ್ಲಮ್ಮ ದೇವಿ ದೇವಸ್ಥಾನಕ್ಕೆ ಆಗಮಿಸಿದ ಭಕ್ತರು ಹುಂಡಿಯಲ್ಲಿ ರೂಪಾಯಿ 1.35 ಕೋಟಿ ಹಣ, ರೂಪಾಯಿ 11.79 ಲಕ್ಷ ಮೌಲ್ಯದ ಚಿನ್ನಾಭರಣ, ರೂಪಾಯಿ 1.80 ಮೌಲ್ಯದ ಬೆಳ್ಳಿ ಹಾಕಿ ಭಕ್ತಿ ಮೆರೆದಿದ್ದಾರೆ.ಯಲ್ಲಮ್ಮ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಮತ್ತು ಸದಸ್ಯರು, ದೇವಸ್ಥಾನ ಕಾರ್ಯನಿರ್ವಾಹಕ ಅಧಿಕಾರಿಗಳು, ಮುಜರಾಯಿ ಇಲಾಖೆ ಬೆಳಗಾವಿ ಸಹಾಯಕ ಆಯುಕ್ತರ ಕಚೇರಿ ಅಧೀಕ್ಷಕರು, ಸವದತ್ತಿ ತಹಶೀಲ್ದಾರ ಕಚೇರಿ ಅಧಿಕಾರಿಗಳು, ಸವದತ್ತಿ ಠಾಣೆ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಮೂರು ದಿ‌ನ ಹುಂಡಿ ಹಣ ಎಣಿಸಲಾಯಿತು.

ಈ ವೇಳೆ ಸವದತ್ತಿ ಯಲ್ಲಮ್ಮ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಎಸ್ ಪಿಬಿ ಮಹೇಶ, ವೈ.ವೈ.ಕಾಳಪ್ಪನವರ, ಕೊಳ್ಳಪ್ಪಗೌಡ ಗಂದಿಗವಾಡ, ಲಕ್ಷ್ಮಿ ಹೂಲಿ, ನಾಗರತ್ನಾ ಚೋಳಿನ, ಬಾಳೇಶ ಅಬ್ಬಾಯಿ, ಎಂ.ಎಸ್.ಯಲಿಗಾರ, ಎಂ.ಪಿ.ದ್ಯಾಮನಗೌಡ್ರ, ಡಿ.ಆರ್.ಚವ್ಹಾಣ, ಅಲ್ಲಮಪ್ರಭು ಪ್ರಭುನವರ, ಸಿ.ಎನ್.ಕುಲಕರ್ಣಿ, ಆನಂದ ಗೊರವನಕೊಳ್ಳ, ಡಿ.ಡಿ.ನಾಗನಗೌಡ್ರ, ದೇವಸ್ಥಾನ ಸಿಬ್ಬಂದಿ ಹಾಗೂ ಸಿಂಡಿಕೇಟ್ ಬ್ಯಾಂಕ್ ಸಿ‌ಬ್ಬಂದಿ ಭಾಗಿಯಾಗಿದ್ಧರು.

Tags:

error: Content is protected !!