ಟ್ರ್ಯಾಕ್ಟರ್ ನಿಂದ ಬಿದ್ದು ಯುವಕ ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಮಾಣಕಾಪೂರ ಗ್ರಾಮದಲ್ಲಿ ನಡೆದಿದೆ
ಸೂರಜ ಶೆವಾಲೆ ( 27) ಮೃತಪಟ್ಟ ಯುವಕ ಎಂದು ತಿಳಿದು ಬಂದಿದೆ. ರಾತ್ರಿ ಗಣೇಶ ವಿಸರ್ಜನೆಯನ್ನು ನೋಡಿ ತನ್ನ ಸ್ನೇಹಿತರೊಂದಿಗೆ ಟ್ರ್ಯಾಕ್ಟರ್ ನಲ್ಲಿ ಮಾಣಾಕಾಪುರ ಗ್ರಾಮಕ್ಕೆ ತೆರಳುತ್ತಿದ್ದರು. ಇದೇ ವೇಳೆ ಏಕಾಏಕಿ ಸಮತೋಲನ ತಪ್ಪಿ ಟ್ಯಾಕ್ಟರ್ ನಿಂದ ಕೆಳಗೆ ಬಿದ್ದು ತೆಲೆಗೆ ಗಂಭೀರವಾಗಿ ಗಾಯವಾಗಿತ್ತು.
ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆಯನ್ನು ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಸಾವನ್ನಪ್ಪಿದ್ದಾನೆ. ಸದಲಗಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.