ಅಧಿಕಾರಿಗಳ ದುರ್ಬಳಕೆ ಮಾಡಿ ಸಿಎಂ ಹೆಸರಿಗೆ ಕಳಂಕ ತರುವ ಹುನ್ನಾರವನ್ನು ವಿರೋಧಿ ಪಕ್ಷಗಳು ಮಾಡುತ್ತಿವೆ ಎಂದು ಅಥಣಿ ಶಾಸಕ ಮತ್ತು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಹೇಳಿದರು.
ಅವರು ಇಂದು ಅಥಣಿಯಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದರು. ಮುಡಾ ಕಾರ್ಯಾಲಯದ ಮೇಲೆ ಇಡಿ ದಾಳಿ ನಡೆದ ವಿಚಾರಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದವರು ಸಿಎಂ ಹೆಸರಿಗೆ ಕಳಂಕ ತರಲು ಅಧಿಕಾರಗಳನ್ನು ಬಳಸಿಕೊಂಡು ಹುನ್ನಾರ ನಡೆಸುತ್ತಿದ್ದಾರೆ ಎಂದು ಅವರು ಆರೋಪಿಸಿದರು.