ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಗಲಭೆ ವಿಚಾರಕ್ಕೇ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆರೋಪಿಗಳ ವಿರುದ್ಧ ದಾಖಲಾಗಿದ್ದ ಕೇಸ್ ಗಳನ್ನು ಹಿಂದೆ ಪಡೆದ ಹಿನ್ನೆಲೆ ಇಂದು ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ ಹಮ್ಮಿಕೊಂಡಿದೆ ಆದ್ರೆ ಕಾನೂನು ಸಚಿವ ಎಚ್ ಕೆ ಪಾಟೀಲ್ ಸರ್ಕಾರದ ನಡೆಯನ್ನು ಸಮರ್ಥನೆ ಮಾಡಿಕೊಂಡಿದ್ದಾರೆ.

ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಅವರು ಗಲಭೆಕೋರರ ಮೇಲಿನ ಕೇಸ್ ವಾಪಸ್ಸು ಪಡೆದಿದ್ದು ಅಲ್ಪ ಸಂಖ್ಯಾತರ ಕಲ್ಯಾಣ ಹಾಗೂ ಅಲ್ಪ ಸಂಖ್ಯಾತರ ಸೇವೆ ಎಂಬ ಮಾತಿನ ಶೈಲಿಯಲ್ಲಿ ಸರ್ಕಾರ ನಡೆಯುತ್ತಿದೆ ಎಂಬ ಮಾತನ್ನು ಮಾಧ್ಯಮದ ಮುಂದೆ ಹೇಳಿದ್ದಾರೆ.
