ಡಿಜೆ ಹಳ್ಳಿ ಮತ್ತು ಕೆಜೆ ಹಳ್ಳಿಯಲ್ಲಿ ಗಲಭೆ ಮಾಡಿದವರು ರಾತ್ರಿ 2 ಗಂಟೆಗೆ ಕೋತಂಬರಿ ತರಲು ಹೋಗಿದ್ರಾ? ಹಳೇ ಹುಬ್ಬಳ್ಳಿ ಗಲಾಟೆಯಲ್ಲಿ ಭಾಗಿಯಾದವರು ಬದನೆಕಾಯಿ ತರಲು ಹೋಗಿದ್ರಾ ಎಂದು ಬಿಜೆಪಿ ಶಾಸಕ ಬಸನವಗೌಡ ಪಾಟೀಲ್ ಯತ್ನಾಳ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಹಳೇ ಹುಬ್ಬಳ್ಳಿ ಗಲಭೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಗಲಭೆಕೋರರ ವಿರುದ್ಧ ದಾಖಲಾದ ಪ್ರಕರಣಗಳನ್ನು ಹಿಂದೆ ತೆಗೆದುಕೊಂಡಿದೆ. ಹೀಗೆ ಕೆಜೆ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ಗಲಭೆ ಮಾಡಿಕೊಂಡವರು ಕೂಡಾ ನಮ್ಮ ಪ್ರಕರಣಗಳನ್ನು ಹಿಂದೆ ತೆಗೆದುಕೊಳ್ಳುವಂತೆ ಪ್ರತಿಭಟನೆ ಮಾಡ್ತಾರೆ ನೋಡಿ ಎಂದು ಶಾಸಕ ಬಸವನಗೌಡ ಯತ್ನಾಳ ಪ್ರತಿಕ್ರಿಯೆ ನೀಡಿದರು.
ಸಿದ್ದರಾಮಯ್ಯ ಹತಾಶೆಯಿಂದ ಏನೇನೋ ಮಾತನಾಡುತ್ತಿದ್ದಾರೆ. ನಾನು ಅಲ್ಪಸಂಖ್ಯಾತರ ಪರವಾಗಿ ಹಿಂದುಳಿದವರ ಪರವಾಗಿ ಇದ್ದೇನೆ ಅಂತ ಹೇಳುತ್ತಾ ತಮ್ಮದೇ ಸಮುದಾಯದ ವಿಶ್ವಾಸವನ್ನು ಸಿದ್ದರಾಮಯ್ಯ ಕಳೆದುಕೊಂಡಿದ್ದಾರೆ. ನಾನು ಮುಸ್ಲಿಂ ಸಮುದಾಯದಲ್ಲಿ ಹುಟ್ಟುತ್ತೇನೆ ಅಂತ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಮುಸ್ಲಿಂ ಸಮುದಾಯಕ್ಕೆ ನೂರಾರು ಕೋಟಿ ಅನುದಾನ ನೀಡುತ್ತಾರೆ. ಆದ್ರೆ ತಮ್ಮ ಸಮುದಾಯಕ್ಕೆ ಕೊಡೋದಿಲ್ಲ. ಅವರ ಸಮುದಾಯಕ್ಕೆ ಸಾವಿರ ಕೋಟಿ ಅನುದಾನ ಕೊಡ್ಲಿ ನಮ್ಮ ಅಭ್ಯಂತರ ಇಲ್ಲ ಎಂದು ಸಿದ್ದರಾಮಯ್ಯ ವಿರುದ್ಧ ಬಸನಗೌಡ ಪಾಟೀಲ್ ವ್ಯಂಗ್ಯವಾಡಿದರು.