Dharwad

ಇಂದು ಅಥವಾ ನಾಳೆ ಟಿಕೆಟ್ ಫೈನಲ್ ಆಗೋ ಸಾಧ್ಯತೆ ಇದೆ- ಸಚಿವ ಲಾಡ್

Share

ಟಿಕೆಟ್ ಹಂಚಿಕೆ ವಿಚಾರದಲ್ಲಿ ಪಕ್ಷದ ಅಧ್ಯಕ್ಷರು ಹಾಗೂ ಸಿಎಂ ಮುಂದೆ ನಮ್ಮ ಅಭಿಪ್ರಾಯ ಮಂಡನೆ ಮಾಡಿದ್ದೇವೆ, ಕಳೆದ ದಿನ ಇದರ ಬಗ್ಗೆ ಚರ್ಚೆ ಮಾಡಲಾಗಿದೆ. ಇಂದು ಅಥವಾ ನಾಳೆ ಟಿಕೆಟ್ ಫೈನಲ್ ಆಗುವ ಸಾಧ್ಯತೆ ಇದೆ ಎಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದ್ದಾರೆ.

ಧಾರವಾಡ ನಗರದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಈಗಾಗಲೇ ಮೂರು ಕ್ಷೇತ್ರದ ಕುರಿತು ಸಿಎಂ‌ ಸಿದ್ದರಾಮಯ್ಯ ಹಾಗೂ ಕೆಪಿಸಿ ಅಧ್ಯಕ್ಷ ಡಿಕೆಶಿಯವರ ಮುಂದೆ ಎಲ್ಲ ಸಚಿವರ ಅಭಿಪ್ರಾಯ ಸಂಗ್ರಹಿಸಲಾಗಿದೆ‌, ಅಂತಿಮ ತೀರ್ಮಾನ ಬರಲಿದೆ. ಶಿಗ್ಗಾಂವಿ ಟಿಕೆಟ್ ನಲ್ಲಿಯೂ ಗೊಂದಲ ವಿಚಾರವಾಗಿ ಪ್ರತಿಕ್ರಿಯಿಸಿ, ನಮ್ಮ ನಮ್ಮ ಅಭಿಪ್ರಾಯ ಈಗಾಗಲೇ ಹೇಳಿದ್ದೇವೆ. ಕೊನೆಯದಾಗಿ ಹೈಕಮಾಂಡ್ ಏನು ತೀರ್ಮಾನ ಮಾಡುತ್ತೋ ಅದೇ ಫೈನಲ್, ಇನ್ನೂ ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ಗೆ ಕಾಂಗ್ರೆಸ್ ಕರೆತರುವ ವಿಚಾರ ಬಹ್ಗೆ ನನಗೆ ಮಾಹಿತಿ ಇಲ್ಲ.

ಆ ಆಗ ಭಾಗದಲ್ಲಿ ಜಾಸ್ತಿ ಮಾಹಿತಿ ಇಲ್ಲ. ನಮ್ಮ ಅಧ್ಯಕ್ಷರೇ ಅಲ್ಲಿ ಜವಾಬ್ದಾರಿ ಇದೆ ಸಿಎಂ ಗೂ ಜವಾಬ್ದಾರಿ ಅಲ್ಲಿದೆ, ಹೈಕಮಾಂಡ್ ಜೊತೆ ಮಾತನಾಡಿ, ಅವರೇ ಫೈನಲ್ ಮಾಡುತ್ತಾರೆ. ಈ ಬಾರಿ ಮೂರಕ್ಕೆ ಮೂರು ಸ್ಥಾನ ಗೆಲ್ಲುತ್ತೇವೆ, ಚನ್ನಪಟ್ಟಣದಲ್ಲಿ ಪಾರ್ಲಿಮೆಂಟ್ ಅಲ್ಲಿ ಲೀಡ್ ಆಗಿದ್ದೇವೆ. ಶಿಗ್ಗಾಂವಿ ಸಹ ಲೀಡ್ ಆಗಿದ್ದೇವೆ, ಸಂಡೂರು ಸಹ ಎರಡು ಬಾರಿ ಲೀಡ್ ಆಗಿದ್ದೇವೆ. ಹೀಗಾಗಿ ನಗೆ ನಂಬಿಕೆ ಇದೆ, ಮೂರಕ್ಕೆ ಮೂರು ನಾವು ಗೆಲ್ಲುತ್ತೇವೆ.

 

Tags:

error: Content is protected !!