Vijaypura

ಕೆಲಸಕ್ಕೆ ಬರೋದಿಲ್ಲ ಅಂದಿದ್ದಕ್ಕೆ ಕಾರ್ಮಿಕರಿಗೆ ಹಿಗ್ಗಾ ಮುಗ್ಗಾ ಥಳಿತ: ಅವಮಾನವೀಯ ವಿಡಿಯೋ ಇನಸ್ಟಾದಲ್ಲಿ ಹರಿಬಿಟ್ಟ ಹಲ್ಲೆಕೋರರು

Share

ಉತ್ತರ ಭಾರತದಲ್ಲಿ ಕೂಲಿ ಕಾರ್ಮಿಕರ ಮೇಲೆ ಹಲ್ಲೆಯಂತಹ ಪ್ರಕರಣಗಳು ನಡೆಯುತ್ತಿದ್ದವದು. ಆದ್ರೆ ಇದೀಗ ಕರ್ನಾಟಕದಲ್ಲೇ ಕೆಲಸ ಮಾಡಲು ಒಲ್ಲೆ ಎಂದ ಕೂಲಿ ಕಾರ್ಮಿಕರನ್ನು ಅವಮಾನವೀಯವಾಗಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದಲ್ಲದೇ ಅದನ್ನು ಸೊಶಿಯಲ್ ಮಿಡಿಯಾ ದಲ್ಲಿ ಹರಿ ಬಿಟ್ಟ ಘಟನೆ ನಡೆದಿದೆ. ಇನ್ನೂ ಮಾರಣಾಂತಿಕ ಹಲ್ಲೆಗೊಳಗಾದವರು ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ‌. ಈ ಕುರಿತು ಇಲ್ಲಿದೆ ಡಿಟೇಲ್ಸ್ ‌..

ವಿಜಯಪುರದಲ್ಲಿ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ‌. ಕೆಲಸಕ್ಕೆ ಬರೋದಿಲ್ಲ ಅಂದಿದ್ದಕ್ಕೆ ಕಾರ್ಮಿಕರಿಗೆ ಹಿಗ್ಗಾ ಮುಗ್ಗಾ ಥಳಿಸಲಾಗಿದೆ. ಕೈ ಕಾಲು ಕಟ್ಟಿ,ಕಾಲ ಮೇಲೆ ನಿಂತು ಪೈಪ್ ನಿಂದ ಹಲ್ಲೆ ನಡೆಸಿ ಅಂಗಾಲು, ಬೆನ್ನು, ಸೊಂಟದ ಮೇಲೆ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ಮೂವರು ಕಾರ್ಮಿಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಅಮಾನುಷ ಘಟನೆ ವಿಜಯಪುರದ ಗಾಂಧಿನಗರದ ಸ್ಟಾರ್ ಚೌಕ್ ಬಳಿ ಇಟ್ಟಿಗೆ ಭಟ್ಟಿಯಲ್ಲಿ ನಡೆದಿದೆ. ಇಟ್ಟಿಗೆ ಭಟ್ಟಿ ಮಾಲೀಕ ಖೇಮು ರಾಠೋಡ್ ಎಂಬಾತ ಸದಾಶಿವ ಮಾದರ, ಸದಾಶಿವ ಬಬಲಾದಿ, ಉಮೇಶ್ ಎಂಬ ಮೂವರು ಕಾರ್ಮಿಕರ ಮೇಲೆ ಹಲ್ಲೆ ಮಾಡಿದ್ದಾನೆ. ಮುಂಗಡವಾಗಿ ಹಣ ಪಡೆದು ಕೆಲಸಕ್ಕೆ ಬರಲು ವಿಳಂಬ ಮಾಡಿದ್ದಕ್ಕೆ ಖೇಮು ರಾಠೋಡ್ ಪೈಪ್‌ಗಳಿಂದ ಕಾರ್ಮಿಕರ ಮೇಲೆ ಹಲ್ಲೆ ಮಾಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಇವರು ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಚಿಕ್ಕಲಿಕಿ ಗ್ರಾಮದವರಾದ ಮೂವರು ಕಾರ್ಮಿಕರು, ಹಬ್ಬಕ್ಕೆಂದು ಊರಿಗೆ ಹೋಗಿದ್ದರು. ಊರಿಗೆ ಹೋಗಿ ವಾಪಸ್ ಬರಲು ವಿಳಂಬ ಮಾಡಿದ್ದಕ್ಕೆ ಹಲ್ಲೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಕಾರ್ಮಿಕರು ಎಷ್ಟೇ ಬೇಡಿಕೊಂಡರೂ ಬಿಡದೆ ಹಲ್ಲೆ ಮಾಡಿದ್ದಾನೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇನ್ನೂ ಘಟನೆಯ ದೃಶ್ಯಾವಳಿಗಳನ್ನು ಸೆರೆ ಹಿಡಿದು ಅವುಗಳನ್ನು ಇನ್ ಸ್ಟಾ ಗ್ರಾಮದಲ್ಲಿ ಹರಿ ಬಿಟ್ಟಿದ್ದಾರೆ. ಸದ್ಯ ಮೂವರನ್ನು ವಿಜಯಪುರ ಜಿಲ್ಲೆಯ ಸಮತಾ ಸೈನಿಕ ದಳದ ಶಾಸ್ತ್ರೀ ಹೊಸಮನಿ ಜಿಲ್ಲಾಸ್ಪತ್ರೆಗೆ ಸೇರಿಸಿದ್ದಾರೆ. ಇನ್ನೂ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಒಟ್ನಲ್ಲಿ ಉತ್ತರ ಭಾರತದಲ್ಲಿ ನಡೆಯುತ್ತಿದ್ದ ಅವಮಾನವೀಯ ಘಟನೆ ವಿಜಯಪುರ ಜಿಲ್ಲೆಯಲ್ಲಿಯೂ ನಡೆದಿದೆ. ಪೊಲೀಸರು ತಕ್ಷಣವೇ ತಪ್ಪಿಸ್ಥರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕಾಗಿದೆ. ಪೊಲೀಸರು ಅದ್ಯಾವ ಕ್ರಮ ತೆಗೆದುಕೊಳ್ಳುವರೋ ಎಂದು ಕಾದು ನೋಡಬೇಕಾಗಿದೆ.

Tags:

error: Content is protected !!