Vijaypura

ಬೈಕ್ ಹಾಗೂ ಗೂಡ್ಸ್ ವಾಹನ ಮಧ್ಯೆ ಅಪಘಾತ: ಎಸ್.ಡಿ.ಎ.ನೌಕರನ ದುರ್ಮರಣ

Share

ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿ ಬೈಕ್ ಹಾಗೂ ಗೂಡ್ಸ್ ವಾಹನ ಮಧ್ಯೆ ರಸ್ತೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.

ಸಿಂದಗಿ ತಾಲೂಕಿನ ಅಳ್ಳೊಳ್ಳಿ ಗ್ರಾಮದ ಎಸ್. ಡಿ. ಎ. ನೌಕರ ಶರಣಗೌಡ ಬಿರಾದಾರ ಎಂಬುವರು ಮೃತಪಟ್ಟಿದ್ದು,ಮೃತನು ಕಕ್ಕಳಮೇಲಿ ಗ್ರಾಮ ಪಂಚಾಯಿತಿಯಲ್ಲಿ ಎಸ್ ಡಿಎಯಾಗಿ ಕಾರ್ಯ ನಿರ್ವಹಿಸುತ್ತಿದ್ದ.

ಶರಣಗೌಡ ಬಿರಾದಾರ್ ಅವರು ಕೆಲಸ ಮುಗಿಸಿಕೊಂಡು ಸಾಯಂಕಾಲ ಬೈಕ್ ಮೇಲೆ ಮನೆಗೆ ತೆರಳುತ್ತಿದ್ದ ವೇಳೆ ವಿಜಯಪುರದಿಂದ ಬರುತ್ತಿದ್ದ ಗೂಡ್ಸ್ ವಾಹನ ಬೈಕ್ ಗೆ ಡಿಕ್ಕಿ ಹೊಡೆದಿದೆ. ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪಿಎಸ್ಐ ಆರಿಫ್ ಮುಶಾಪುರಿ ಹಾಗೂ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು. ಈ ಕುರಿತು ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ…

Tags:

error: Content is protected !!