ಚಿಕ್ಕೋಡಿ:ಮೈಕ್ರೋ ಫೈನಾನ್ಸ್ ಸಾಲದ ಕಿರುಕುಳಕ್ಕೆ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಬಾಗ ತಾಲೂಕಿನಲ್ಲಿ ನಡೆದಿದೆ.

ರಾಯಬಾಗ ತಾಲೂಕಿನ ಅಳಗವಾಡಿ ಗ್ರಾಮದ ರೈತ ಶಿವನಪ್ಪ ರಾವಜಪ್ಪ ಧರ್ಮಟ್ಟಿ (66) ಮೃತ ದುರ್ದೈವಿ. ಚಿಕ್ಕೋಡಿ ಐ ಡಿ ಎಫ್ ಸಿ ಬ್ಯಾಂಕ್ ನ ಕಾಟಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಹಾರೂಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ರೈತನ ಆತ್ಮಹತ್ಯೆ ಕಾರಣ ಪೊಲೀಸ್ ತನಿಖೆಯಿಂದ ದೃಢವಾಗಬೇಕಿದೆ.