ಬೆಳಗಾವಿ: ಸುಕ್ಷೇತ್ರ ಸುಳೇಭಾವಿ ಗ್ರಾಮದ ಶ್ರೀ ಮಹಾಲಕ್ಷ್ಮಿ ದೇವಿಯ ಜಾತ್ರಾ ಮಹೋತ್ಸವದಲ್ಲಿ ಕುಟುಂಬದ ಸದಸ್ಯರೊಂದಿಗೆ ಪಾಲ್ಗೊಂಡ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ದೇವಿಗೆ ಉಡಿ ತುಂಬಿ, ಲೋಕ ಕಲ್ಯಾಣಕ್ಕಾಗಿ ಪ್ರಾರ್ಥನೆ ಸಲ್ಲಿಸಿದರು.

ಈ ಪಾವನ ಕ್ಷಣಗಳಲ್ಲಿ ದೇವಿಯ ಕೃಪೆಯನ್ನು ಅನುಭವಿಸುವುದು ನಿಜಕ್ಕೂ ಸೌಭಾಗ್ಯ. ಶ್ರೀ ಮಹಾಲಕ್ಷ್ಮಿಯ ಕೃಪೆ, ಆಶೀರ್ವಾದ ಎಲ್ಲರ ಮೇಲಿರಲಿ ಎಂದು ಸಚಿವರು ಪ್ರಾರ್ಥಿಸಿದರು. ತಾಯಿ ಗಿರಿಜಾ ಹಟ್ಟಿಹೊಳಿ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಸೇರಿದಂತೆ ಕುಟುಂಬದ ಸದಸ್ಯರು ಇದ್ದರು.