ಸಂಸತ್ತಿನಲ್ಲಿ ಐತಿಹಾಸಿಕ ವಕ್ಪ್ ಬಿಲ್ ಮಂಡನೆ ಮಾಡಿ ಅವತೇ ರಾತ್ರಿ ಬಿಲ್ ಪಾಸ್ ಆಗಿದ್ದು ಸ್ವಾಗತಾರ್ಹ. ವಕ್ಪ್ ಬೋರ್ಡ್ ಹೆಸರಿನಲ್ಲಿ ಸರ್ಕಾರಿ ಜಾಗ, ರೈತರ, ಮಠಮಾನ್ಯಗಳ , ದಲಿತರ ಜಾಗ, ಎಂಎಲ್ ಎ , ಎಂಪಿಗಳ ಜಾಗವನ್ನು ಅತಿಕ್ರಮಣ ಮಾಡಿ ವಕ್ಪ್ ಬೋರ್ಡ್ ಲೂಟಿ ಮಾಡುತ್ತಿತ್ತು. ಇಂತಹ ವಿರುದ್ಧ ಬಿಲ್ ಪಾಸ್ ಮಾಡಿರುವ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಅಭಿನಂದನೆ ಎಂದು ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು.

ನಗರದಲ್ಲಿಂದು ಕೆಎಂ ಸಿಆರ್ ಐಗೆ ಭೇಟಿನೀಡಿ ನಿನ್ನೆ ಆತ್ಮಹತ್ಯೆಗೆ ಯತ್ನಿಸಿದ ಯುವತಿ ಕುಟುಂಬಕ್ಕೆ ಧೈರ್ಯ ತುಂಬಿ ಮಾತನಾಡಿದ ಅವರು, ವಕ್ಪ್ ಬಿಲ್ ವಿರೋಧ ಮಾಡುತ್ತಿರುವವರು ದೇಶದ್ರೋಹಿಗಳು. ಬರೀ ಓಟ್ ಬ್ಯಾಂಕ್, ಅಧಿಕಾರ ಒಂದೇ ಅಲ್ಲ. ದೇಶ, ಜನ ಇದ್ದಾರೆ. ಆದರೆ ನೀವು ಲೂಟಿಕೋರರ ಪರವಾಗಿ ನಿಲ್ಲುತ್ತಾರೆ. ಕನಿಷ್ಠ ಪ್ರಜ್ಞೆ ಇಲ್ಲ.
ಸಂವಿಧಾನದ ಮೀರಿ ಕಾಂಗ್ರೆಸ್ ಕಾನೂನು ತಂದಿದೆ ಅವರಿಗೆ ನಾಚಿಕೆ ಆಗಬೇಕು. ಸಂವಿಧಾನದ ಧಿಕ್ಕರಿಸಿ ವಕ್ಪ್ ಬೋರ್ಡ್ ಗೆ ಪವರ್ ನೀಡಿದ್ದರು. ಕಾಂಗ್ರೆಸ್ ನವರು ನೀತಿಗೆಟ್ಟವರು, ನೀಚ ಕಾಂಗ್ರೆಸ್ ಗರು.. ವಕ್ಪ್ ಬೋರ್ಡ್ ನನ್ನು ಕೆಲ ಮೌಲ್ವಿಗಳು ವ್ಯವಸ್ಥಿತವಾಗಿ ತಮ್ಮ ಸ್ವಾರ್ಥಕ್ಕೆ ಬಳಕೆ ಮಾಡುತ್ತಿದ್ದರು.
ಮಲ್ಲಿಕಾರ್ಜುನ ಖರ್ಗೆ ವಕ್ಪ್ ಬೋರ್ಡ್ ಹೆಸರಿನಲ್ಲಿ ನೂರಾರು ಎಕರೆ ಲೂಟಿ ಮಾಡಿರುವ ಆರೋಪ ಹೊರಬಂದಿದೆ.
ಅನ್ವರ್ ಮಾನ್ಪಡಿ ವರದಿಯಲ್ಲಿ ದಾಖಲೆ ಸಮೇತ ಇದೆ ಇದಕ್ಕೆಲ್ಲಾ ಕರ್ನಾಟಕ ಬಿಜೆಪಿ ಕಾರಣ ಕರ್ನಾಟಕ ಬಿಜೆಪಿಯವರು ಅನ್ವರ್ ಮಾನ್ಪಡಿ ವರದಿಯನ್ನು ತಮ್ಮ ಕುರ್ಚಿ ಬುಡದಲ್ಲಿ ಇಟ್ಟುಕೊಂಡು ಈಗ ವಕ್ಪ್ ಬೋರ್ಡ್ ಬಗ್ಗೆ ಮಾತನಾಡುತ್ತಾರೆ. ಕರ್ನಾಟಕ ಬಿಜೆಪಿಗೆ ನಾಚಿಕೆ ಆಗಬೇಕು.
ಎಷ್ಟು ರೀತಿಯ ಡಿಲಿಂಗ್ , ವ್ಯವಹಾರ ಆಗಿದೆ. ಕರ್ನಾಟಕ ಬಿಜೆಪಿಗೆ ವಕ್ಪ್ ಬೋರ್ಡ್ ಬಿಲ್ ಬಗ್ಗೆ ಮಾತನಾಡಬೇಡಿ. ಓವೈಸಿ ಮತ್ತು ಮುಸ್ಲಿಂ ಎಂಪಿಕ್ಕಿಂತ ಹಿಂದೂ ಎಂಪಿಗಳು ವಿರೋಧ ಮಾಡಿದರು. ಇವರಿಗೆ ಮಾನ, ಮರ್ಯಾದೆ ಇದೆಯಾ?
ವಕ್ಪ್ ಬೋರ್ಡ್ ಮುಂದೆ ನಿಮ್ಮ ಆಸ್ತಿ ಕಬಳಿಸಿದಾಗ ನೀವು ಸತ್ತೋಗಿರುತ್ತಿರಿ..ಮೋದಿಯವರು ತೆಗೆದುಕೊಂಡ ಕ್ರಮ ಅತ್ಯಂತ ಶ್ರೇಷ್ಠವಾಗಿದೆ ಎಂದರು. ಏ.18ಕ್ಕೆ ಒಂದು ಸಾವರ ತ್ರಿಶೂಲ ದೀಕ್ಷೆ: ನೇಹಾ ಹಿರೇಮಠ ಹತ್ಯೆಯಾಗಿ ಏಪ್ರಿಲ್18 ಕ್ಕೆ ಒಂದು ವರ್ಷ ಆಗುತ್ತೆ ಅಂದು ಶ್ರೀರಾಮಸೇನೆ ಒಂದು ಸಾವಿರ ಮಹಿಳೆಯರಿಗೆ ತ್ರಿಶೂಲ ದೀಕ್ಷೆ ನೀಡಲಿದೆ. ಮಹಿಳೆಯರು ತಮ್ಮ ಬ್ಯಾಗ್ ನಲ್ಲಿ ಈ ತ್ರಿಶೂಲ ಇಟ್ಟುಕೊಳ್ಳಲಿ ಇಂತಹವರು ಯಾರಾದ್ರು ಬಂದ್ರೆ ಚುಚ್ಚಿ. ಅತ್ಯಾಚಾರಿಗಳು, ಕೊಲೆಗಡುಕರು, ಲವ್ ಜಿಹಾದ್ ಮಾಡುವವರಿಗೆ ಚುಚ್ಚಿ. ಕಾಂಗ್ರೆಸ್ ಮಹಿಳೆಯರ ರಕ್ಷಣೆ ಮಾಡಲ್ಲ. ಕಾಂಗ್ರೆಸ್ ಇರೋದು ಮುಸ್ಲಿಂರ ರಕ್ಷಣೆಗಾಗಿ, ಅವರ ಓಟ್ ಗಾಗಿ ಜೋಲ್ಲು ಸುರಿಸುತ್ತಾರೆ ಎಂದು ಕಿಡಿಕಾರಿದರು.
ಮುಸ್ಲಿಂ ಯುವಕನಿಂದ ಹಲ್ಲೆಗೊಳಗಾದ ಯುವತಿಗೆ ಯಾವುದೇ ತೊಂದರೆ ಇಲ್ಲ. ಯುವಕ ಟಾರ್ಚರ್ ನಿಂದ ನೊಂದು 13 ಮಾತ್ರೆಗಳನ್ನು ಸೇವಿಸಿದ್ದಾಳೆ.
ಸಿರಾಜ್ ಮತ್ತು ಯುವತಿ ನಡುವೆ 9 ಕ್ಲಾಸ್ ನಿಂದ ಪ್ರೀತಿ ಇತ್ತು. ಆದರೆ ಗ್ರಾಮಸ್ಥರು ಅಂದೇ ಅದನ್ನು ಬಗೆಹರಿಸಿದ್ದರು. ಇದಾದ ಮೇಲೆ ಸಿರಾಜ್ ಪಿಡಿಸುತ್ತಿದ್ದ ನಿಮ್ಮ ತಂದೆ -ತಾಯಿ ಕೊಲೆ ಮಾಡುವೆ ಅಂತ ಬೆದರಿಕೆ ಹಾಕಿದ್ದ. ರಂಜಾನ್ ನಿಂದ ಹಾಸ್ಟೆಲ್ಗೆ ತೆರಳಿ ಹಲ್ಲೆ ಮಾಡಿದ್ದಾನೆ.. ನೇಹಾ ಹಿರೇಮಠ ಹತ್ಯೆ ಆಗಿ ಇನ್ನೂ ಒಂದು ವರ್ಷ ಆಗಿಲ್ಲ ಈಗ ಮತ್ತೆ ಅಂತಹ ಘಟನೆ ಮರುಕಳಿಸುತ್ತಿವೆ
ಇದಕ್ಕೆ ಕಾಂಗ್ರೆಸ್ ಸರ್ಕಾರ, ಪೊಲೀಸ್ ಇಲಾಖೆ, ನ್ಯಾಯಾಲಯ ಕಾರಣ. ಇಂತಹವರನ್ನು ಎನ್ ಕೌಂಟರ್ ಮಾಡಿ ಬಿಸಾಕಿದ್ರೆ ಈ ರೀತಿಯ ಕೃತ್ಯ ನಡೆಯೋದಿಲ್ಲ. ಇಂತಹ ಕೃತ್ಯ ಮಾಡೋರಿಗೆ ಭಯವೆ ಇಲ್ಲದಂತಾಗಿದೆ. ಇಂತಹ ಪರಿಸ್ಥಿತಿ ಕಾಂಗ್ರೆಸ್ ನಿರ್ಮಾಣ ಮಾಡಿದೆ ಸರ್ಕಾರದ ಶಿಕ್ಷೆ ನೀಡದಿದ್ದರೇ ನಾವೇ ಅವನಿಗೆ ಶಿಕ್ಷೆ ನೀಡುತ್ತೇವೆ ಎಂದರು.
ಇಡೀ ದೇಶದಲ್ಲಿ ಹಿಂದುತ್ವದ ಹೆಸರಿನಲ್ಲಿ ಇರುವುದು ಬಿಜೆಪಿ ಪಕ್ಷ ಒಂದೇ. ಆದರೆ ಕರ್ನಾಟಕದಲ್ಲಿ ಹಿಂದುತ್ವ, ಹಿಂದೂ ಸಂಘಟನೆಗಳನ್ನು ಸರಿಯಾಗಿ ಗಮನಿಸಿಲ್ಲ. ಹಿಂದು ಸಂಘಟನೆಗಳ ಕಾರ್ಯಕರ್ತರ ಮೇಲಿನ ಕೇಸ್ ವಾಪಸಾತಿ ಮಾಡಿಲ್ಲ. ಬಿಜೆಪಿ ಆಡಳಿತದಲ್ಲೆ ಹಿಂದು ಸಂಘಟನೆ ಮುಖ್ಯಸ್ಥರ ಕೊಲೆಯಾಯಿತು.
ಇದರ ಪರಿಣಾಮವಾಗಿ ಕರ್ನಾಟಕದಲ್ಲಿ ಬಿಜೆಪಿ ನೆಲಕ್ಕೆ ಬಿದ್ದಿದೆ. ಯತ್ನಾಳ ಅವರು ಹಿಂದೂ ಪಕ್ಷ ಕಟ್ಟುವುದಕ್ಕಿಂತ ಬಿಜೆಪಿಯನ್ನೆ ಪ್ರಬಲ ಹಿಂದುಪಕ್ಷ ಮಾಡೋದು ಒಳ್ಳೆಯದು. ಯತ್ನಾಳರನ್ನು ವಾಪಸಾತಿ ಮಾಡಲೇ ಬೇಕು. ರಾಜ್ಯದಲ್ಲಿ ಮುಂದೆ ಬಿಜೆಪಿ ಒಳ್ಳೆಯ ಭವಿಷ್ಯವಿದೆ ಎಂದರು.