Banglore

ನಿಮಗಿಂತ ಹೋರಾಡುವ ಹೆಚ್ಚುಶಕ್ತಿ ಜನರು ಕಾಂಗ್ರೆಸ್ಸಿಗೆ ನೀಡಿದ್ದಾರೆ; “ಬಿಜೆಪಿಗೆ ಡಿಕೆಶಿ ವಾರ್ನಿಂಗ್”!!!

Share

ಬಿಜೆಪಿ ನಾಯಕರು ತಮ್ಮ ಕಾರ್ಯಕರ್ತರಿಗೆ ತಿಳಿ ಹೇಳಬೇಕು. ಇಲ್ಲದಿದ್ದರೇ, ರಾಜ್ಯದಲ್ಲಿ ಎಲ್ಲಿಯೂ ಬಿಜೆಪಿ ಕಾರ್ಯಕ್ರಮಗಳನ್ನು ಮಾಡಲು ಅವಕಾಶ ನೀಡುವುದಿಲ್ಲವೆಂದು ಡಿಸಿಎಂ ಮತ್ತು ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಎಚ್ಚರಿಕೆಯನ್ನು ನೀಡಿದರು.

ಇಂದು ಬೆಳಗಾವಿಯಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು ಬಿಜೆಪಿಗರು ಇದೇ ರೀತಿ ತಮ್ಮ ಪ್ರವೃತ್ತಿಯನ್ನು ಮುಂದುವರೆಸುವುದಾದರೇ, ಈಡೀ ರಾಜ್ಯದಲ್ಲಿ ಬಿಜೆಪಿಯ ಒಂದು ಸಭೆಯನ್ನು ಮಾಡಲು ಅವಕಾಶ ನೀಡುವುದಿಲ್ಲ. ಒಂದು ಕಾಂಗ್ರೆಸ್ ಪಕ್ಷದ ಒಂದು ಪ್ರತಿಜ್ಞೆ.ಚಿನ್ನದ ಬೆಲೆ, ತೈಲ್ ಬೆಲೆ, ಗ್ಯಾಸ್ ಬೆಲೆಯನ್ನು ಬಿಜೆಪಿ ಸರ್ಕಾರ ಹೆಚ್ಚಿಸಿದೆ. ಬಿಜೆಪಿ ಕಾರ್ಯಕರ್ತರು ಮೊದಲು ಇದರ ಉತ್ತರವನ್ನು ನೀಡಲಿ. ರಾಜ್ಯದಲ್ಲಿ ಕಾಂಗ್ರೆಸ್ 52 ಸಾವಿರ ಕೋಟಿಯ ಗ್ಯಾರಂಟಿ ಯೋಜನೆಗಳನ್ನು ನೀಡಿ, ರಾಜ್ಯದ ಜನರಿಗೆ ಸಹಾಯ ಮಾಡಿದ್ದೇವೆ ಎಂದರು.

ಬಿಜೆಪಿ ನಾಯಕರು ತಮ್ಮ ಕಾರ್ಯಕರ್ತರಿಗೆ ತಿಳಿ ಹೇಳಬೇಕು. ಬಿಜೆಪಿಗರಿಗಿಂತ ಹೋರಾಟ ಮಾಡುವ ಶಕ್ತಿಯನ್ನು ರಾಜ್ಯದ ಜನರು ಕಾಂಗ್ರೆಸಗೆ ನೀಡಿದ್ದಾರೆ. ಪಕ್ಷದ ಕಾರ್ಯಕರ್ತರಿಗೆ ಬುದ್ಧಿವಾದ ಹೇಳಿದರೇ ಸರಿ ಇಲ್ಲವಾದರೇ, ಎಲ್ಲಿಯೂ ಬಿಜೆಪಿ ಕಾರ್ಯಕ್ರಮಗಳಿಗೆ ಅವಕಾಶ ನೀಡುವುದಿಲ್ಲ. ಎಲ್ಲ ತರಹದ ಪ್ರತಿ ಹೋರಾಟಕ್ಕೆ ಕಾಂಗ್ರೆಸ್ ಸಿದ್ಧವಾಗಿದೆ ಎಂದು ಎಚ್ಚರಿಕೆಯನ್ನು ನೀಡಿದರು.

Tags:

error: Content is protected !!