ಕರ್ನಾಟಕ ರಾಜ್ಯ ಭಾರತೀಯ ಕೃಷಿಕ ಸಮಾಜದ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ಶುಕ್ರವಾರ ನಡೆಯಿತು

ನಂತರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಭಾರತೀಯ ಕೃಷಿಕ ಸಮಾಜದ ರಾಜ್ಯಾಧ್ಯಕ್ಷ ಸಿದ್ದೇಗೌಡ ಮೋದಗಿ ಅವರು,
ಭಾರತೀಯ ಕೃಷಿಕ ಸಮಾಜ ಏಳು ಜಿಲ್ಲೆಗಳ ಅಧ್ಯಕ್ಷರುಗಳನ್ನು ಆಯ್ಕೆ ಮಾಡುವ ಮೂಲಕ ರಾಜ್ಯಮಟ್ಟದ ಪೂರ್ಣ ಪ್ರಮಾಣದ ಸಮಿತಿಯನ್ನು ರಚಿಸಲಾಗಿದೆ. ಕಾನೂನು ಬದ್ಧವಾಗಿ ಸಮಿತಿಯ ಆಯ್ಕೆ ಪ್ರಕ್ರಿಯೆ ನಡೆಸಿ ಪದಗ್ರಹಣ ಸಮಾರಂಭದ ಮೂಲಕ ಅಧ್ಯಕ್ಷರುಗಳಿಗೆ ಅಧಿಕಾರಗಳನ್ನು ನೀಡಲಾಗಿದೆ. ರಾಜ್ಯ, ಜಿಲ್ಲೆ , ತಾಲೂಕ ಹಾಗೂ ಗ್ರಾಮೀಣ ಮಟ್ಟದಲ್ಲಿ ಸಂಘಟನೆ ಮಾಡುವ ಮೂಲಕ ರೈತರ ಸಮಸ್ಯೆಗಳಿಗೆ ಅಂತ್ಯ ಹಾಡಲು ಹಾಗೂ ಆರ್ಥಿಕವಾಗಿ ರೈತ ಸಮುದಾಯವನ್ನು ಬಲಪಡಿಸುವದು ಹಾಗೂ ರೈತರ ಕುಂದು ಕೊರತೆಗಳನ್ನು ಸರ್ಕಾರದ ಗಮನಕ್ಕೆ ತಂದು ಪರಿಹಾರ ಪಡೆದುಕೊಳ್ಳುವುದು ಸೇರಿದಂತೆ ಮುಂತಾದ ರೈತಪರ ಕಲ್ಯಾಣ ಕಾರ್ಯಕ್ರಮಗಳ ಉದ್ದೇಶವನ್ನು ಹೊಂದಲಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಎಲ್ಲಾ ನೂತನ ಪದಾಧಿಕಾರಿಗಳಿಗೆ ಆದೇಶ ಪತ್ರಗಳನ್ನು ನೀಡಿ ಶುಭ ಕೋರಿದರು. ನೂತನ ಪದಾಧಿಕಾರಿಗಳಾದ ರಾಜ್ಯ ಉಪಾಧ್ಯಕ್ಷರಾದ ಬಾಳಾಸಾಹೇಬ ಉದಗಟ್ಟಿ, ರಾಮನಗೌಡ ಭರಮಗೌಡರ, ಕಾರ್ಯದರ್ಶಿಗಳಾದ ಸಿ ಕುಮಾರಸ್ವಾಮಿ, ಬಿ. ವಿ. ಕೃಷ್ಣಮೂರ್ತಿ ಹಾಗೂ ಹಾವೇರಿ ಜಿಲ್ಲಾ ಅಧ್ಯಕ್ಷ ಶಿವಾನಂದ ಕರಿಗಾರ, ಧಾರವಾಡ ಜಿಲ್ಲಾಧ್ಯಕ್ಷ ಜಗದೀಶ ಕೊಂಡಿಕೊಪ್ಪ , ಬೆಳಗಾವಿ ಜಿಲ್ಲಾ ಅಧ್ಯಕ್ಷೆ ಗೀತಾ ಧರೆನ್ನವರ ಚಿಕ್ಕೋಡಿ ಜಿಲ್ಲಾ ಅಧ್ಯಕ್ಷ ರಾಮನಗೌಡ ಪಾಟೀಲ್ ರಾಜ್ಯ ಸಮಿತಿ ನಿರ್ದೇಶಕ ಬಸನಗೌಡ ಮೇಲಿನಮನಿ, ಇನ್ನಿತರರು ಪದಗ್ರಹಣ ಸಮಾರಂಭದಲ್ಲಿ ಅಧಿಕಾರ ಸ್ವೀಕರಿಸಿದರು. ಸಮಾರಂಭದಲ್ಲಿ ಕೃಷಿಕ ಸಮಾಜದ ಪದಾಧಿಕಾರಿಗಳು ಹಾಗೂ ರೈತ ಬಾಂಧವರು ಉಪಸ್ಥಿತರಿದ್ದರು.