Banglore

ಉಗ್ರರನ್ನು ಮಟ್ಟ ಹಾಕಲು ಪಕ್ಷಭೇದ ಮರೆತು ಒಗ್ಗಟ್ಟು ಪ್ರದರ್ಶಿಸಬೇಕಿದೆ…

Share

ಉಗ್ರರನ್ನು ಮಟ್ಟ ಹಾಕಲು ಪಕ್ಷಭೇದ ಮರೆತು ಒಗ್ಗಟ್ಟು ಪ್ರದರ್ಶನ ಮಾಡಬೇಕಿದೆ. ಉಗ್ರರನ್ನು ಸದೆಬಡೆಯಲು ಕೇಂದ್ರ ಸರ್ಕಾರ ತೆಗೆದುಕೊಳ್ಳುವ ಯಾವುದೇ ಕ್ರಮಕ್ಕೂ ನಮ್ಮ ಸರ್ಕಾರದ ಬೆಂಬಲವಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಇಂದು ಬೆಳಗಾವಿಯ ಯಳ್ಳೂರಿನಲ್ಲಿ ಮಾಧ್ಯಮಗಾರರೊಂದಿಗೆ ಮಾತನಾಡಿದ ಅವರು, ಕಾಶ್ಮೀರದಲ್ಲಿ ನಡೆದಿರುವುದು ದುರ್ದೈವಿ ಘಟನೆ. ರಾಜಕೀಯ ಮಾಡದೇ ಉಗ್ರರನ್ನು ಮಟ್ಟ ಹಾಕಲು ಎಲ್ಲ ಪಕ್ಷದವರು ಸಹಯೋಗವನ್ನು ನೀಡಲಾಗುತ್ತಿದೆ. ಕೇಂದ್ರ ಸರ್ಕಾರ ಉಗ್ರರನ್ನು ಸದೆಬಡೆಯಲು ಕೈಗೊಳ್ಳುವ ಎಲ್ಲ ಕ್ರಮಕ್ಕೂ ರಾಜ್ಯ ಸರ್ಕಾರದ ಬೆಂಬಲವಿದೆ ಎಂದರು. ಈಗಾಗಲೇ ಎಐಸಿಸಿ ಅಧ್ಯಕ್ಷರು ಕೂಡ ಇದನ್ನೇ ಹೇಳಿದ್ದಾರೆ ಎಂದರು.

Tags:

error: Content is protected !!