ಸೋಮವಾರ ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ನಡೆಸುತ್ತಿದ್ದ ಪ್ರತಿಭಟನಾ ಸಮಾವೇಶಕ್ಕೆ ನುಸುಳಿ ಗಲಾಟೆ ಮಾಡಿದ್ದ ಬಿಜೆಪಿ ಮಹಿಳಾ ಕಾರ್ಯಕರ್ತರನ್ನು ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು

ಬೆಳಗಾವಿ ಸಿಪಿಎಡ್ ಮೈದಾನದಲ್ಲಿ ನಡೆದಿದ್ದ ಕಾಂಗ್ರೆಸ್ ಸಮಾವೇಶಕ್ಕೆ ನುಸುಳಿದ್ದ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆಗಳನ್ನು ಕೂಗಿ ಕಪ್ಪು ಬಟ್ಟೆ ಪ್ರದರ್ಶನ ಮಾಡಿ ಗೊಂದಲ ಸೃಷ್ಟಿಸಿದ್ದರು.ಈ ಹಿನ್ನೆಲೆಯಲ್ಲಿ ಶಿಲ್ಪಾ ಕೇಕರೆ, ಪವಿತ್ರಾ ಹಿರೇಮಠ, ರೇಷ್ಮಾ ಭರಮುಚೆ,ಮಂಜುಳಾ ಹಣ್ಣಿಕೇರಿ ಹಾಗೂ ಅನ್ನಪೂರ್ಣ ಹಾವಳ ಅವರನ್ನುತಕ್ಷಣವೇ ವಶಕ್ಕೆ ಪಡೆದಿದ್ದ ಕ್ಯಾಂಪ ಪೊಲೀಸ್ ಠಾಣೆ ಸಿಪಿಐ ಪರಶುರಾಮ್ ಪೂಜಾರಿ ಹಾಗೂ ಪಿ ಎಸ್ ಐ ರುಕ್ಮಿಣಿ ಅವರು ವೈದ್ಯಕೀಯ ತಪಾಸನೆ ನಡೆಸಿ ನಂತರ ಎಲ್ಲರನ್ನೂ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದರು.
