ಹುಬ್ಬಳ್ಳಿಯಲ್ಲಿ ಐದು ವರ್ಷದ ಮಗುವನ್ನು ಕರೆದುಕೊಂಡು ಹೋಗಿ ಹತ್ಯೆ ನಡೆದಿರುವ ಪ್ರಕರಣವನ್ನು ಖಂಡಿಸುತ್ತೇನೆ. ಸರ್ಕಾರ ಕಾನೂನು ಸುವ್ಯವಸ್ಥೆಯ ಬಗ್ಗೆ ಎಚ್ಚರಿಕೆವಹಿಸಬೇಕು. ಈ ಘಟನೆಯ ಕಾರಣರಾದವರಿಗೆ ಕಠಿಣ ಶಿಕ್ಷೆಯಾಗುವಂತೆ ಪೊಲೀಸ್ ಇಲಾಖೆ ತನಿಖೆ ಮಾಡಬೇಕು ಎಂದು ಧಾರವಾಡದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆಗ್ರಹಿಸಿದರು.
ಈ ಕುರಿತು ಧಾರವಾಡದಲ್ಲಿ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಐದು ವರ್ಷದ ಮಗುವನ್ನು ಕರೆದುಕೊಂಡು ಹೋಗಿ ಕೊಲೆ ನಡೆದಿದೆ. ಈ ಕೊಲೆ ಆರೋಪಿ ಸೈಕೋಪಾತ್ ಎಂದು ಹೇಳಲಾಗುತ್ತಿದೆ. ಕೂಡಲೇ ಹುಬ್ಬಳ್ಳಿ ಪೊಲೀಸರು ಕಾರ್ಯ ಪ್ರವೃತರಾಗಬೇಕು. ಈ ಘಟನೆಗೆ ಕಾರಣರಾದ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗುವಂತೆ ತನಿಖೆ ಕೈಗೊಳ್ಳಬೇಕು. ಇನ್ನೊಬ್ಬರು ಇಂತಹ ಘಟನೆಯಲ್ಲಿ ಭಾಗಿಯಾಗಲು ಹಿಂದೆ ಮುಂದೆ ನೋಡುವಂತೆ ಮಾಡಬೇಕು. ಇದರಲ್ಲಿನಾನು ರಾಜಕೀಯ ಬೇರೆಸುವುದಕ್ಕೆ ಇಷ್ಟಪಡುವುದಿಲ್ಲ. ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.