ಸೋಮವಾರ ಕೇಂದ್ರ ಸರ್ಕಾರದ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ನಡೆಸುತ್ತಿದ್ದ ಪ್ರತಿಭಟನಾ ಸಮಾವೇಶಕ್ಕೆ ನುಸುಳಿ ಗಲಾಟೆ ಮಾಡಿದ್ದ ಬಿಜೆಪಿ ಮಹಿಳಾ ಕಾರ್ಯಕರ್ತರನ್ನು ಬಂಧಿಸಿ ಪೊಲೀಸರು ಬೆಳಗಾವಿ ಜಿಲ್ಲಾ ನ್ಯಾಯಾಲಯವು ಹಾಜರುಪಡಿಸಿದ್ದರು. ನ್ಯಾಯಾಲವು ಷರತ್ತು ಬದ್ಧ ಜಾಮೀನನ್ನು ಮಂಜೂರು ಮಾಡಿದೆ.

ಬೆಳಗಾವಿ ಸಿಪಿಎಡ್ ಮೈದಾನದಲ್ಲಿ ನಡೆದಿದ್ದ ಕಾಂಗ್ರೆಸ್ ಸಮಾವೇಶಕ್ಕೆ ನುಸುಳಿದ್ದ ಬಿಜೆಪಿ ಮಹಿಳಾ ಕಾರ್ಯಕರ್ತೆಯರು ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆಗಳನ್ನು ಕೂಗಿ ಕಪ್ಪು ಬಟ್ಟೆ ಪ್ರದರ್ಶನ ಮಾಡಿ ಗೊಂದಲ ಸೃಷ್ಟಿಸಿದ್ದರು. ಅವರನ್ನು ತಕ್ಷಣವೇ ವಶಕ್ಕೆ ಪಡೆದಿದ್ದ ಕ್ಯಾಂಪ ಪೊಲೀಸ್ ಠಾಣೆ ಸಿಪಿಐ ಪರಶುರಾಮ್ ಪೂಜಾರಿ ಹಾಗೂ ಪಿ ಎಸ್ ಐ ರುಕ್ಮಿಣಿ ಅವರು ವೈದ್ಯಕೀಯ ತಪಾಸನೆ ನಡೆಸಿ ನಂತರ ಎಲ್ಲರನ್ನೂ ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಿದರು.ಬಿಜೆಪಿ ಕಾರ್ಯಕರ್ತೆಯರಾದ ಶಿಲ್ಪಾ ಕೇಕರೆ, ಪವಿತ್ರಾ ಹಿರೇಮಠ, ರೇಷ್ಮಾ ಬರಮೂಚೆ, ಮಂಜುಳಾ ಹಣ್ಣೀಕೇರಿ, ಅನ್ನಪೂರ್ಣಾ ಹವಳ, ಸುಮಿತ್ರಾ ಜಾಲಗಾರ್ಗೆ ಬೆಳಗಾವಿಯ ಐದನೇ ಜೆಎಂಎಫ್ಸಿ ನ್ಯಾಯಾಲಯವು ಒಂದು ಎಕರೆ ಜಮೀನು ಸ್ಯೂರಿಟಿ ಪಡೆದು ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ನ್ಯಾಯಾಧೀಶೆ ಸ್ಪರ್ಷಾ ಡಿಸೋಜಾರಿಂದ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತೆಯರ ಪರ ವಿನೋದಕುಮಾರ ಪಾಟೀಲ ಮತ್ತು ಧನ್ಯಕುಮಾರ್ ಪಾಟೀಲ ವಕಾಲತ್ತು ವಹಿಸಿದ್ದರು.
