Athani

ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆಗೆ ಹಿಂದೇಟು …

Share

ಶಿವ ಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ ಕುರಿತು ರಾಜ್ಯ ಸರ್ಕಾರ ಪ್ರತಿ ಸರ್ಕಾರಿ ಕಚೇರಿ ಶಾಲಾ ಕಾಲೇಜುಗಳಲ್ಲಿ ಕಡ್ಡಾಯವಾಗಿ ಜಯಂತಿ ಆಚರಣೆ ಮಾಡುವಂತೆ ಆದೇಶ ನೀಡಿದ್ದರು ತಾಲೂಕಿನ ಬಹುತೇಕ ಸರ್ಕಾರಿ ಕಚೇರಿ ಹಾಗೂ ಶಾಲಾ ಕಾಲೇಜುಗಳಲ್ಲಿ ಹೇಮರಡ್ಡಿ ಮಲ್ಲಮ್ಮ ಆಚರಣೆ ಮಾಡದೆ ಅವಮಾನ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಶಿವ ಶರಣೆ ಹೇಮರಡ್ಡಿ ಮಲ್ಲಮ್ಮ ಅವರ 603 ನೇ ಜಯಂತಿ ರಾಜ್ಯದೆಲ್ಲೆಡೆ ಅದ್ದೂರಿಯಾಗಿ ಆಚರಿಸಲಾಗಿದೆ. ಆದರೇ ಅಥಣಿ ತಾಲೂಕಿನ ಬಹುತೇಕ ಸರ್ಕಾರಿ ಕಚೇರಿಗಳಲ್ಲಿ ಜಯಂತಿ ಆಚರಣೆ ಮಾಡದೆ ಇರುವುದರಿಂದ ಶಿವಶರಣೆ ಬಗ್ಗೆ ಅಗೌರವ ತೋರಲಾಗಿದೆ ಎಂದು ಹೇಮರೆಡ್ಡಿ ಮಲ್ಲಮ್ಮ ಅಸಮದಾಯದ ಮುಖಂಡರು ಅಸಮಾಧಾನ ಹೊರಹಾಕಿದರು. ನಂತರ ಎಚ್ಚೆತ್ತುಕೊಂಡ ಶಿಕ್ಷಕರು ಮತ್ತು ಸಮಾಜ ಬಾಂಧವರು ಜಯಂತಿಯನ್ನು ಆಚರಿಸಿದ್ದಾರೆ.

ತಾಲೂಕಿನ ರಡ್ಡೆರೆಟ್ಟಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಾಲಾ ಶಿಕ್ಷಕರು ಹಾಗೂ ಆಡಳಿತ ಮಂಡಳಿ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ ಮಾಡದ ಕಾರಣ ಸಮುದಾಯದ ಪ್ರಮುಖರು ಶಾಲಾ ಶಿಕ್ಷಕರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಅದೆ ರೀತಿ ತಾಲೂಕಿನ ಬಹುತೇಕ ಕಡೆಗಳಲ್ಲಿ ಜಯಂತಿ ಆಚರಣೆ ಮಾಡದೆ ಇರುವುದು ಮೇಲ್ನೋಟಕ್ಕೆ ಕಂಡುಬಂದಿದ್ದು ಅಧಿಕಾರಿಗಳು ಕೂಲಂಕುಷವಾಗಿ ಪರಿಗಣಿಸಿ ಅಂತವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

Tags:

error: Content is protected !!