ಬೆಳಗಾವಿ ಜಿಲ್ಲೆಯ ಹಿಡಕಲ್ ಜಲಾಶಯದಿಂದ ಧಾರವಾಡದ ಕೈಗಾರಿಗೆ ವಸಾಹತಿಗೆ ನೀರು ತೆಗೆದುಕೊಂಡು ಹೋಗುವ ಕೆಲಸ ಸ್ಥಗಿತವಾಗಿದೆ ಎಂದಿದ್ದಾರೆ. ಆದರೇ ಕಾಮಗಾರಿ ಮಾತ್ರ ಪ್ರಗತಿಯಲ್ಲಿದ್ದು, ಜನರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ.
ಒಂದು ಕಡೆಯಿಂದ ಹಿಡಕಲ್ ಡ್ಯಾಂ ನೀರು ಧಾರವಾಡ ಕೈಗಾರಿಕಾ ಪ್ರದೇಶಕ್ಕೆ ಒಯ್ಯುತಿದ್ದರೆ ಇನ್ನೊಂದು ಕಡೆ ಖಾನಾಪುರದಿಂದ ಎಂ.ಕೆ ಹುಬ್ಬಳ್ಳಿ ಮೂಲಕ ಧಾರವಾಡಕ್ಕೆ ನೀರು ಒಯ್ಯುತ್ತಿದ್ದಾರೆ. ಇದರಿಂದಾಗಿ ಬೆಳಗಾವಿಯ ಜನರು ಅಸಮಾಧಾನ ವ್ಯಕ್ತಪಡಿಸಿದ್ದು, ಮುಂಬರುವ ದಿನಗಳಲ್ಲಿ ಜಿಲ್ಲೆಯ ಜನ ಜಾನುವಾರುಗಳಿಗೆ ನೀರಿನ ಸಮಸ್ಯೆ ಎದುರಾದರೇ, ಜವಾಬ್ದಾರರ್ಯಾರು ಎಂಬ ಪ್ರಶ್ನೆ ಜನರು ಕೇಳುತ್ತಿದ್ದಾರೆ.
