ತೊಂದರೆಯಲ್ಲಿರುವವರಿಗೆ ಯಾವುದೇ ಪ್ರತಿಫಲಾಪೆಕ್ಷೆಯಿಲ್ಲದೆ ಸಹಾಯ ಮಾಡುವ ಮನೋಭಾವವನ್ನು ಬೆಳೆಸಿಕೊಳ್ಳುವುದು ನಿಸ್ವಾರ್ಥ ಸೇವೆಯಾಗುತ್ತದೆ ಎಂದು ಆರ್ಟ ಆಫ್ ಗಿವಿಂಗ್ ಫೌಂಡೇಶನದ ರಾಷ್ಟಿçÃಯ ರಾಯಭಾರಿ ಶಿಫಾ ಜಮಾದಾರ ನುಡಿದರು.
ಇಲ್ಲಿನ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕನ್ನಡ ಸಭಾ ಭವನದಲ್ಲಿ ಆರ್ಟ ಆಫ್ ಗಿವಿಂಗ್ ಫೌಂಡೇಶನ್ ನವದೆಹಲಿ ಹಾಗೂ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸಂಯುಕ್ತ ಆಶ್ರಯದಲ್ಲಿ ಜರುಗಿದ ಆರ್ಟ ಆಫ್ ಗಿವಿಂಗ್ ಫೌಂಡೇಶನದ ಸ್ಥಾಪನಾ ದಿನಾಚರಣೆ ಅಂಗವಾಗಿ ನೆರೆಯವರ ಉತ್ತಮ ಬಾಂಧವ್ಯ ಎಂಬ ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡುತ್ತ ಸುಂದರ ಸಮಾಜವನ್ನು ಕಟ್ಟಲು ಪ್ರತಿಯೊಬ್ಬರು ಸೇವಾ ಮನೋಭಾವ, ನೆರೆಯವರ ಜೊತೆ ಸೌಹಾರ್ದತೆಯನ್ನು ಬೆಳೆಸಿಕೊಳ್ಳಲು ಶ್ರಮಿಸಬೇಕು. ಪ್ರತಿಯೊಬ್ಬರು ತಮ್ಮ ಸುತ್ತಮುತ್ತಲಿನ ಜನರ ಕಷ್ಟಗಳಿಗೆ ಸ್ಪಂದಿಸುವ ಮನೋಭಾವವನ್ನು ಹೊಂದಿರಬೇಕು. ಜೀವನದಲ್ಲಿ ಆನಂದದ ಕ್ಷಣಗಳು ಹೇಳಿ ಬರುವದಿಲ್ಲ ಬಂದಾಗ ಚಿಕ್ಕ ಚಿಕ್ಕ ಆನಂದವನ್ನು ಸವಿಯುವ ಕಲೆಯನ್ನು ಬೆಳೆಸಿಕೊಳ್ಳಬೇಕು. ನಿರ್ಗತಿಕರ, ಬಲಹಿನರ, ಮಹಿಳೆಯರ, ಮಕ್ಕಳ ಸಹಾಯ ಮಾಡಿದಾಗ ಅದರ ಫಲ ನಮಗೆ ದ್ವಿಗುಣ ರೀತಿಯಲ್ಲಿ ಮರಳಿ ಸಿಗುತ್ತದೆ ಎಂದರು.
ದಾನ ಕಲೆ ಎಂದರೆ ದಯೆ ಮತ್ತು ಹೌದಾರ್ಯದ ಮೂಲಕ ಬೇಷರತ್ತಾದ ಮತ್ತು ಸುತ್ತಿರವಾದ ಪ್ರೀತಿ, ಶಾಂತಿ ಮತ್ತು ಸಂತೋಷ ಹಾಗೂ ಸಂತೃಪ್ತಿಯನ್ನು ಸೃಷ್ಟಿಸುವುದು ನಿಜವಾದ ದಾನ ಎಂದರು.
ಆರ್ಟ ಆಫ್ ಗಿವಿಂಗ್ ಫೌಂಡೇಶನದ ರಾಷ್ಟ್ರೀಯ ಸಂಯೋಜಕ ಡಾ. ಜಾವಿದ ಜಾಮದಾರ ಮಾತನಾಡುತ್ತ ಓಡಿಸ್ಸಾ ರಾಜ್ಯದ ಭುವನೇಶ್ವರ ನಗರದಲ್ಲಿ ಡಾ. ಅಚ್ಚುತಾ ಸಾಮಂತ ಎಂಬ ವ್ಯಕ್ತಿ ೪೦ ಸಾವಿರ ಮಕ್ಕಳಿಗೆ ದೇಶಾದ್ಯಾಂತ ೯೦ ಸಾವಿರ ಮಕ್ಕಳಿಗೆ ಕೆ.ಜಿ. ಯಿಂದ ಪಿ.ಜಿ.ವರೆಗೆ ಸಂಪೂರ್ಣ ಉಚಿತ ಶಿಕ್ಷಣ ನೀಡುತ್ತಿದ್ದಾರೆ. ಅದರಂತೆ ಆರ್ಟ ಆಫ್ ಗಿವಿಂಗ್ ಫೌಂಡೇಶನ ಮುಖಾಂತರ ಅನೇಕ ಕಾರ್ಯಕ್ರಮಗಳನ್ನು ಮಾಡಲಾಗುತ್ತಿದೆ. ಇಂದು ಫೌಂಡೇಶನದ ಸ್ಥಾಪನಾ ದಿನಾಚರಣೆಯನ್ನು ೧೬೦ ವಿವಿಧ ರಾಷ್ಟçಗಳಲ್ಲಿ ದೇಶದ ೩೦ ರಾಜ್ಯದ ೩೮೦ ಜಿಲ್ಲೆಯಲ್ಲಿ ಏಕಕಾಲಕ್ಕೆ ಆಚರಿಸುತ್ತಿದ್ದೇವೆ. ಒಬ್ಬರಿಗೊಬ್ಬರಿಗೆ ಸಹಾಯ ಮಾಡುವುದು ಅತ್ಯವಶ್ಯಕ ಸಮಾಜದಲ್ಲಿ ಬದುಕಲು ಪರಸ್ಪರ ಸಹಾಯ ಸಹಕಾರ ಅನಿವಾರ್ಯವಾಗಿದೆ. ನಾವು ಮಾಡುವ ಚಿಕ್ಕ ಸಹಾಯಗಳು ಕೂಡ ಬೇರೆಯವರ ಜೀವನವನ್ನು ಉತ್ತಮ ಪಡಿಸುತ್ತದೆ ಎಂದರು.

ಸಮಾರAಭದ ಅಧ್ಯಕ್ಷತೆಯನ್ನು ವಹಿಸಿ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡುತ್ತ ಯುವಶಕ್ತಿ ಸರಿಯಾದ ರೀತಿಯಲ್ಲಿ ಬೆಳೆಯಬೇಕು. ವಿದ್ಯಾರ್ಥಿಗಳು ಸ್ವಾವಲಂಬಿಗಳಾಗುವದರ ಜೊತೆಗೆ ಬೇರೆಯವರಿಗೆ ಸಹಾಯ ಮಾಡುವ ಸಂಸ್ಕೃತಿ ಮತ್ತು ಮನೋಭಾವ ಬೆಳೆಸಿಕೊಳ್ಳಬೇಕು. ಸಮಾಜಕ್ಕಾಗಿ ನಿಸ್ವಾರ್ಥ ಸೇವೆಯನ್ನು ಸಲ್ಲಿಸಬೇಕು. ಇರುವ ಅವಕಾಶಗಳನ್ನು ಬಳಸಿಕೊಂಡು ಸೇವೆಯೇ ನಮ್ಮ ಮಾನವ ಧರ್ಮ ಎಂದು ಅರ್ಥ ಮಾಡಿಕೊಳ್ಳಬೇಕು. ವಿಶ್ವಗುರು ಬಸವಣ್ಣನವರು ಹಾಕಿಕೊಟ್ಟ ಮಾರ್ಗದಲ್ಲಿ ನಾವೆಲ್ಲರೂ ಮುನ್ನಡೆದರೆ ನಿಸ್ವಾರ್ಥ ಸಮಾಜ ಕಟ್ಟಬಹುದು. ಸಾಮಾಜಿಕ ಜಾಲತಾಣದಲ್ಲಿ ದೇಶಭಕ್ತಿ, ಸಮಾಜಸೇವೆ ಗುಣ ಪ್ರದರ್ಶಿಸಿದ ನಮ್ಮ ನೈಜ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಪ್ರೋ. ಅಚ್ಚುತಾ ಸಾಮಂತ ಆರ್ಟ ಆಫ್ ಗಿವಿಂಗ್ ಫೌಂಡೇಶನ್ ಮುಖಾಂತರ ವಿಶ್ವದಲ್ಲಿಯೇ ಶಿಕ್ಷಣ ಕ್ರಾಂತಿ ಹಾಗೂ ಸಾಮಾಜಿಕ ಸೇವಾ ಮನೋಭಾವದ ನಿಸ್ವಾರ್ಥ ಸೇವೆ ಮಾಡುತ್ತಿದ್ದಾರೆ ಎಂದರು.
ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್. ಸಂಯೋಜನಾಧಿಕಾರಿ ಪ್ರೊ. ಅಶೋಕ ಸುರಪೂರ, ಪ್ರೊ. ವಿಷ್ಣು ಶಿಂಧೆ, ಪ್ರೊ. ಕಲಾವತಿ ಕಾಂಬಳೆ, ಮಾತನಾಡಿದರು. ಕಾರ್ಯನಿರ್ವಾಹಕ ಅಭಿಯಂತಕ ಎಂ
.ಪಿ. ಕದಮ, ಡಾ. ಪ್ರಜಾಪತಿ, ಡಾ. ಗುಲಾಬ ರಾಠೋಡ, ಪ್ರೀತಿ ಪತ್ತಾರ, ಯುಸೂಫ ಕೊಟ್ಟಲ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಿಗಾಗಿ ಸಮಾಜಸೇವೆ ರಾಷ್ಟçದ ಕುರಿತಂತೆ ವಿವಿಧ ವಿಷಯಗಳ ಬಗ್ಗೆ ಪ್ರಬಂಧ ಸ್ಪರ್ಧೆ ರಸಪ್ರಶ್ನೆ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಮೊದಲಿಗೆ ಪೂಜಾ ಬಿರಾದಾರ ಸ್ವಾಗತಿಸಿದರು. ಭಾಗ್ಯಶ್ರೀ ಕೋಲಕಾರ ವಂದಿಸಿದರು. ಅರ್ಚನಾ ನಿರೂಪಿಸಿದರು.
