ಐತಿಹಾಸಿಕ ವಿಜಯಪುರ ರೈಲು ನಿಲ್ದಾಣಕ್ಕೆ ಡಾ. ಬಿ ಆರ್ ಅಂಬೇಡ್ಕರ್ ನಾಮಕರಣ ಮಾಡುವಂತೆ ಆಗ್ರಹಿಸಿ ದಲಿತ ಪರ ಸಂಘಟನೆಗಳಿಂದ ಜಿಲ್ಲಾಧಿಕಾರಿ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರು 1930ರಲ್ಲಿ ವಿಜಯಪುರ ಪಟ್ಟಣಕ್ಕೆ ಆಗಮಿಸಿ ಈ ನೆಲದಲ್ಲಿ ದಲಿತ ಸಮುದಾಯದೊಂದಿಗೆ ನಗರದ ರಾಣಿ ಬಗೀಚ್ ದಲ್ಲಿ ಸಂವಾದ ನಡೆಸಿರುವ ಇತಿಹಾಸ ಇದ್ದು, ಕೇಂದ್ರ ಸರ್ಕಾರ ರೈಲ್ವೆ ನಿಲ್ದಾಣಕ್ಕೆ ಡಾ. ಅಂಬೇಡ್ಕರ್ ಹೆಸರು ಇಡುವಂತೆ ಪ್ರತಿಭಟನಾಕಾರರು ಆಗ್ರಹಿಸಿದರು.
