ಚಿಕ್ಕೋಡಿ:ಚಿಕ್ಕೋಡಿ ತಾಲೂಕಿನ ಕೇರೂರ ಗ್ರಾಮದ ಜೋಡಕುರಳಿ ರಸ್ತೆಯಿಂದ ಪಾಟೀಲ ತೋಟದ ರಸ್ತೆ ಸುಧಾರಣೆಗಾಗಿ ೫೦ ಲಕ್ಷ ರೂಪಾಯಿ ವೆಚ್ಚದ ಕಾಮಗಾರಿಗೆ ಗ್ರಾಮದ ಮುಖಂಡರಾದ ಮಲ್ಲಿಕಾರ್ಜುನ ಪಾಟೀಲಯವರು ಚಾಲನೆ ನೀಡಿದರು.
ಶಾಸಕ ಗಣೇಶ ಹುಕ್ಕೇರಿ, ಎಂಎಲ್ಸಿ ಪ್ರಕಾಶ ಹುಕ್ಕೇರಿಯವರ ಪ್ರಯತ್ನದಿಂದ ಮಂಜೂರಾದ ರಸ್ತೆಗೆ ಗ್ರಾಮಸ್ಥರ ಸಮ್ಮುಖದಲ್ಲಿ ಮಲ್ಲಿಕಾರ್ಜುನ ಪಾಟೀಲಯವರು ಚಾಲನೆಯನ್ನು ನೀಡಿದರು.ಇದೇ ಸಂಧರ್ಭದಲ್ಲಿ ಸ್ಥಳೀಯರು ಮಾಧ್ಯಮಗಳ ಜೊತೆಗೆ ಮಾತನಾಡಿ ಈ ರಸ್ತೆ ನಿರ್ಮಾಣ ಆಗಬೇಕೆಂದು ಬಹುದಿನಗಳ ಬೇಡಿಕೆಯಾಗಿತ್ತು.ಈ ಬಗ್ಗೆ ನಮ್ಮ ನಾಯಕರಾದ ಶಾಸಕ ಗಣೇಶ ಹುಕ್ಕೇರಿ ಎಂಎಲ್ಸಿ ಪ್ರಕಾಶ ಹುಕ್ಕೇರಿಯವರಿಗೆ ಮನವಿ ಮಾಡಿಕೊಂಡಿದವು.ನಮ್ಮ ಬೇಡಿಕೆಗೆ ಅನುಸಾರವಾಗಿ ೫೦ ಲಕ್ಷ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದಾರೆ.ಇವತ್ತು ರಸ್ತೆ ಕಾಮಗಾರಿಗೆ ಚಾಲನೆಯನ್ನು ನೀಡಿದೇವೆ.ಅವರಿಗೆ ನಮ್ಮ ಗ್ರಾಮಸ್ಥರ ಪರವಾಗಿ ಕೃತಜ್ಞತೆಯನ್ನು ಸಲ್ಲಿಸುತ್ತೇವೆ ಎಂದರು.

ಈ ಸಂಧರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷ ವೀರೇಂದ್ರ ಪಾಟೀಲ ಅಧ್ಯಕ್ಷ, ರವಿ ಪಾಟೀಲ, ಸತ್ಯಪ್ಪ ಖೋತ,ಮಹೇಶ ಪಾಟೀಲ, ರಾಯಪ್ಪ ಹರಕೆ,ಮಲ್ಲಪ್ಪ ಬಾಗಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು…