ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವ……
ವಿದ್ಯಾರ್ಥಿಗಳಿಗೆ ಪ್ರಶಸ್ತಿ, ಚಿನ್ನದ ಪದಕ ಪ್ರದಾನ ಮಾಡಿದ ರಾಜ್ಯಪಾಲ ಥಾವರಚಂದ್ ಗೆಹ್ಲೊಟ್….
ಬಾಗಲಕೋಟೆ ತೋಟಗಾರಿಕೆ ವಿಶ್ವವಿದ್ಯಾಲಯದ 14ನೇ ಘಟಕೋತ್ಸವದಲ್ಲಿ ರಾಜ್ಯಪಾಲ ಥಾವರಚಂದ ಗೆಹ್ಲೊಟ್ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರದಾನ ಮಾಡಿದರು
ರಾಜ್ಯಪಾಲರು ಸೇರಿದಂತೆ ಅನೇಕ ಗಣ್ಯರ ಸಮ್ಮುಖದಲ್ಲಿ ನಡೆದ ಘಟಕೋತ್ಸವದಲ್ಲಿ ತೋಟಗಾರಿಕೆ ವಿಶ್ವವಿದ್ಯಾಲಯದ ಪದವಿ ಸ್ನಾತಕೋತ್ತರ ಪದವಿ ಪಿ ಎಚ್ ಡಿ ಚಿನ್ನದ ಪದಕ ಸೇರಿದಂತೆ ವಿವಿಧ ಪದವಿಗಳನ್ನು ರಾಜಪಾಲ ಥಾವರಚಂದ ಗೆಹ್ಲೊಟ್ ಪ್ರದಾನ ಮಾಡಿದರು.
ವಿಜಯನಗರದ ಸಹನಾ ಪಟಗೆ 17 ಚಿನ್ನದ ಪದಕ, ಕೊಪ್ಪಳದ ಭೀಮವ್ವ ಕರ್ಕಿಹಳ್ಳಿ 16 ಚಿನ್ನದ ಪದಕ ಸೇರಿದಂತೆ ಒಟ್ಟು 30 ಚಿನ್ನದ ಪದಕ ಪ್ರದಾನ ಮಾಡಲಾಯಿತು.
ಸಮಾರಂಭದಲ್ಲಿ ವಿಶ್ವವಿದ್ಯಾಲಯದ ಉಪಕುಲಪತಿ, ಇನ್ನಿತರ ಗಣ್ಯರು, ಸಿಬ್ಬಂದಿ, ವಿದ್ಯಾರ್ಥಿಗಳು ಹಾಗೂ ಪಾಲಕರು ಉಪಸ್ಥಿತರಿದ್ದರು