Belagavi

ಬೆಳಗಾವಿ: ಬಸ್ಸಿನ ಕಿಟಕಿ ಸೀಟಿಗಾಗಿ ಕಿತ್ತಾಟ…

Share

ಬಸ್’ನ ಕಿಟಕಿ ಸೀಟಗಾಗಿ ಕಿತ್ತಾಡಿಕೊಂಡು ಅಪರಿಚಿತ ಯುವಕರು ಕಾಲೇಜು ವಿದ್ಯಾರ್ಥಿಗೆ ಹರಿತವಾದ ಆಯುಧದಿಂದ ಇರಿದ ಘಟನೆ ಬೆಳಗಾವಿ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ.

ಬೆಳಗಾವಿಯ ಕೇಂದ್ರ ಬಸ್ ನಿಲ್ದಾಣದಲ್ಲಿ ಬಸ್’ನ ಕಿಟಕಿ ಸೀಟಗಾಗಿ ಕಾಲೇಜು ವಿದ್ಯಾರ್ಥಿಯೊಂದಿಗೆ ಅಪರಿಚಿತ ಯುವಕರು ಜಗಳಕ್ಕಿಳಿದು, ಜಗಳ ವಿಕೋಪಕ್ಕೆ ಹೋಗಿ ವಿದ್ಯಾರ್ಥಿಯ ಎದೆಗೆ ಹರಿತವಾದ ಆಯುಧದಿಂದ ಇರಿದು ಪರಾರಿಯಾಗಿದ್ದಾರೆ. ಗಾಯಗೊಂಡ ವಿದ್ಯಾರ್ಥಿ ಬೆಳಗಾವಿ ತಾಲೂಕಿನ ಪಂತ ಬಾಳೇಕುಂದ್ರಿ ಗ್ರಾಮದ ಮಾಜ್ ಸನದಿ (19) ಗೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಜಿಲ್ಲಾಸ್ಪತ್ರೆಗೆ ಡಿಸಿಪಿ ರೋಹನ್ ಜಗದೀಶ್ ಭೇಟಿ ನೀಡಿ ಪರಿಶೀಲನೆಯನ್ನು ನಡೆಸಿದ್ದಾರೆ. ಪಂತ ಬಾಳೇಕುಂದ್ರಿಯಿಂದ ಬೆಳಗಾವಿ ಕೇಂದ್ರ ಬಸ್ ನಿಲ್ದಾಣಕ್ಕೆ ಬರುವ ವರೆಗೂ ಜಗಳವಾಡಿ, ಅಪರಿಚಿತರು ಹರಿತವಾದ ಆಯುಧದಿಂದ ಇರಿದಿದ್ದಾರೆ. ಈಗಾಗಲೇ ಬಸ್ ಪತ್ತೆಯಾಗಿದ್ದು, ಅಪರಿಚಿತರನ್ನು ಪತ್ತೆ ಮಾಡಲು 3 ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಇನ್ ನ್ಯೂಸ್’ಗೆ ಮಾಹಿತಿಯನ್ನು ನೀಡಿದರು.

ಬೆಳಗಾವಿ ಮಾರ್ಕೆಟ್ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Tags:

error: Content is protected !!