khanapur

ಕುಪ್ಪಟಗಿರಿ ಕ್ರಾಸ್ ಬಳಿ ಹೊಸ ಟ್ರಾನ್ಸ್’ಫಾರ್ಮರ್ ಲೋಕಾರ್ಪಣೆಗೊಳಿಸಿದ ಮಾಜಿ ಶಾಸಕ ಅರವಿಂದ ಪಾಟೀಲ್

Share

ಖಾನಾಪೂರ ತಾಲೂಕಿನ ಕುಪ್ಪಟಗಿರಿ ಕ್ರಾಸ್ ಬಳಿ ನೂತನ ಟ್ರಾನ್ಸಫಾರ್ಮರ್’ನ್ನು ಮಾಜಿ ಶಾಸಕ ಹಾಗೂ ಬಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಅರವಿಂದ ಪಾಟೀಲ ಅವರು ಲೋಕಾರ್ಪಣೆಗೊಳಿಸಿದರು.

ಈ ವೇಳೆ ಗ್ರಾಮದಲ್ಲಿ ನಿರಂತರ ವಿದ್ಯುತ್ ಪೂರೈಕೆ ಹಾಗೂ ತಾಂತ್ರಿಕ ತೊಂದರೆ ನಿವಾರಣೆಗೆ ಈ ಟ್ರಾನ್ಸಫಾರ್ಮರ್ ಸಹಕಾರಿಯಾಗಲಿದೆ ಎಂಬ ವಿಶ್ವಾಸವನ್ನು ಜನಪ್ರತಿನಿಧಿಗಳು ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ಮಾಡಿಗುಂಜಿ ಪಿಕೆಪಿಎಸ್ ಅಧ್ಯಕ್ಷ ಪ್ರಕಾಶ ಗಾವಡೆ, ದೀಪಕ್ ಪಾಟೀಲ ಮತ್ತು ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

Tags:

error: Content is protected !!