Khanapur

ಸ್ವಂತ ತಾವೇ ಉಪಹಾರ ವಿತರಿಸುವ ಮೂಲಕ ಖಾನಾಪೂರದ ಇಂದಿರಾ ಕ್ಯಾಂಟೀನ್ ಉದ್ಘಾಟಿಸಿದ ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೋಳ್ಳಿ ಮತ್ತು ಶಾಸಕ ವಿಠ್ಠಲ ಹಲಗೇಕರ

Share

ಖಾನಾಪೂರದ ಬಹುದಿನಗಳ ಕನಸು ನನಸಾಯಿತು ಗ್ರಾಮೀಣ ಪ್ರದೇಶದ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಾಜಿ ಶಾಸಕಿ ಎಐಸಿಸಿ ಕಾರ್ಯದರ್ಶಿ ಡಾಕ್ಟರ್ ಅಂಜಲಿ ನಿಂಬಾಳ್ಕರ್ ಅವರು ತಮ್ಮ ಕಾಲಾವಧಿಯಲ್ಲಿ ಈ ಇಂದಿರಾ ಕ್ಯಾಂಟೀನ್ ಮಂಜುರಾತಿಗೆ ಪ್ರಸ್ತಾವನೆ ಸಲ್ಲಿಸಿದರು ಬಹು ನಿರೀಕ್ಷಿತ

ಈ ಇಂದಿರಾ ಕ್ಯಾಂಟೀನ್ ಇವತ್ತು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಸೇರಿದಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಸೇರಿದಂತೆ ಇನ್ನಿತರ ಪ್ರಮುಖ ಗಣ್ಯಮಾನ್ಯ ಉಪಸ್ಥಿತರಿಯಲ್ಲಿ ಉದ್ಘಾಟನೆ ಸಮಾರಂಭ ನಡೆಯಬೇಕಾಗಿತ್ತು ಕಾರಣಾಂತರಗಳಿಂದ ಜಿಲ್ಲೆಯ ಇಬ್ಬರು ಪ್ರಭಾವಿ ಸಚಿವರು ಆಗಮಿಸಿಲ್ಲ ವಿಧಾನ ಪರಿಷತ್ ಸದಸ್ಯ ಚನ್ನರಾಜ್ ಹಟ್ಟಿಹೋಳ್ಳಿ ಮತ್ತು ಶಾಸಕ ವಿಠ್ಠಲ ಹಲಗೇಕರ ಅವರು ಸ್ವಂತ ತಾವೇ ಸಾರ್ವಜನಿಕರಿಗೆ ಉಪಹಾರ ನೀಡುವ ಮೂಲಕ ಉದ್ಘಾಟಿಸಿದರು

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮಹಾಂತೇಶ ರಾಹುತ್ ಈಶ್ವರ್ ಘಾಡಿ ಕಾಂಗ್ರೆಸ್ ಮುಖಂಡರಾದ ಚಂಬಣ್ಣ ಹೊಸಮನಿ, ಸಂತೋಷ್ ಹಂಜಿ, ಮಹಾಂತೇಶ ಕಲ್ಯಾಣಿ , ಮಹಿಳಾ ಗ್ರಾಮೀಣ ಘಟಕದ ದೀಪಾ ಪಾಟೀಲ ಕಾಂಗ್ರೆಸ್ ಸಿಟಿ ಅಧ್ಯಕ್ಷ ಇಸಾಕ್ ಖಾನ್ ಪಠಾಣ್ ಪಂಚ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷರಾದ ಸೂರ್ಯಕಾಂತ ಕುಲಕರ್ಣಿ

,ಪಟ್ಟಣ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರು ಸದಸ್ಯರು ಸೇರಿದಂತೆ ಬಿಜೆಪಿ ಮುಖಂಡರು, ಸರ್ಕಾರಿ ಅಧಿಕಾರಿಗಳು ಬಹುಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

ಅಲ್ತಾಫ್ ಎಂ ಬಸರೀಕಟ್ಟಿ
ಇನ್ ನ್ಯೂಸ್ ಖಾನಾಪೂರ

Tags:

error: Content is protected !!