BELAGAVI

ಜ್ಯೋತಿ ಸೆಂಟ್ರಲ್ ಶಾಲೆಯಲ್ಲಿ ವಿಶೇಷ ಕಾರ್ಯಾಗಾರ

Share

ಬೆಳಗಾವಿ: ದಕ್ಷಿಣ ಮಹಾರಾಷ್ಟ್ರ ಶಿಕ್ಷಣ ಮಂಡಳದ ಜ್ಯೋತಿ ಸೆಂಟ್ರಲ್ ಶಾಲೆಯಲ್ಲಿ ವಿಮರ್ಶಾತ್ಮಕ ಮತ್ತು ಸೃಜನಾತ್ಮಕ ಚಿಂತನೆ ವಿಷಯದ ಮೇಲೆ ಆಧಾರಿತ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

ಬೆಳಗಾವಿಯ ದಕ್ಷಿಣ ಮಹಾರಾಷ್ಟ್ರ ಶಿಕ್ಷಣ ಮಂಡಳದ ಜ್ಯೋತಿ ಸೆಂಟ್ರಲ್ ಶಾಲೆಯಲ್ಲಿ ಶಾಲಾ ಮುಖ್ಯಾಧ್ಯಾಪಕಿ ಸೋನಾಲಿ ಕಂಗ್ರಾಳಕರ್ ಅವರ ಅವರ ಮಾರ್ಗದರ್ಶನದಲ್ಲಿ CBSE ಶಿಕ್ಷಕರಿಗಾಗಿ ಎರಡು ದಿನಗಳ “Critical and Creative Thinking” ವಿಷಯದ ಮೇಲೆ ಆಧಾರಿತ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.
ಈ ಕಾರ್ಯಾಗಾರದಲ್ಲಿ ಮುಖ್ಯ ಸಂಪನ್ಮೂಲ ವ್ಯಕ್ತಿಗಳಾಗಿ ಎ.ಬಿ. ಪಾಟೀಲ ಪಬ್ಲಿಕ್ ಸ್ಕೂಲ್, ಸಂಕೇಶ್ವರದ ಸಂಯೋಜಕಿ ಗುಲ್ತಾಜ್ ಖಾನ್ ಮತ್ತು ಲವ್‌ಡೇಲ್ ಸೆಂಟ್ರಲ್ ಸ್ಕೂಲ್, ಬೆಳಗಾವಿಯ CBSE ಆಡಳಿತಾಧಿಕಾರಿ ಕವೀತಾ ಕುಲಕರ್ಣಿ ಭಾಗವಹಿಸಿದ್ದರು.
ಈ ಕಾರ್ಯಾಗಾರದಲ್ಲಿ ಬೆಳಗಾವಿ ಜಿಲ್ಲೆಯ ವಿವಿಧ CBSE ಶಾಲೆಗಳ ಸುತ್ತಮುತ್ತಲಿನ 60ಕ್ಕೂ ಅಧಿಕ ಶಿಕ್ಷಕರು ಪಾಲ್ಗೊಂಡರು. ಕಾರ್ಯಕ್ರಮದ ನಿರೂಪಣೆಯನ್ನು ಶಾಲಾ ಶಿಕ್ಷಕಿ ಕೃಪಾ ಕದಮ್ ಅವರು ಯಶಸ್ವಿಯಾಗಿ ನಿರ್ವಹಿಸಿದರು.

Tags:

error: Content is protected !!