ನಾವಿಬ್ಬರು ಚೆನ್ನಾಗಿ ಇದ್ದೇವೆ. ಯಾರು ಏನೇ ಹೇಳಿದರು ಕೇಳುವುದಿಲ್ಲ. ಬಿಜೆಪಿ ಅವರು ಸುಳ್ಳು ಹೇಳುತ್ತಿದ್ದಾರೆ. ಈ ಸರ್ಕಾರ ಐದು ವರ್ಷ ಬಂಡೆ ರೀತಿ ಭದ್ರವಾಗಿ ಇರುತ್ತದೆ” ಎಂದು ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದರು.
ಮೈಸೂರಿನ ವಿಮಾನ ನಿಲ್ಧಾಣದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, “ನಾನು ಡಿ.ಕೆ. ಶಿವಕುಮಾರ್ ಚೆನ್ನಾಗಿ ಇದ್ದೇವೆ. ಬಿಜೆಪಿಯವರು ಸುಳ್ಳನ್ನು ಹೇಳುತ್ತಿದ್ದಾರೆ. ಈ ಸರ್ಕಾರ ಐದು ವರ್ಷ ಬಂಡೆ ರೀತಿ ಭದ್ರವಾಗಿ ಇರುತ್ತದೆ. ಯಾರು ಈ ವಿಚಾರದಲ್ಲಿ ಏನು ಹೇಳಿದರೂ ಕೇಳುವುದಿಲ್ಲ. ಬಿಜೆಪಿಯವರು ಸುಳ್ಳು ಹೇಳುವುದರಲ್ಲಿ ನಿಸ್ಸೀಮರು ಈ ಬಗ್ಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ” ಎಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಡಿಸಿಎಂ ಕೈ ಜೊತೆ ಕೈ ಸೇರಿಸಿ, ಮೇಲಕ್ಕೆತ್ತಿ ವಿರೋಧ ಪಕ್ಷಗಳಿಗೆ ಟಕ್ಕರ್ ಕೊಟ್ಟರು.
ಮುಂದುವರೆದ ಅವರು, “ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಅನುಮತಿ ಕೊಡಬೇಕು. ಏಕೆಂದರೆ ಮಳೆಗಾಲದಲ್ಲಿ ಹೆಚ್ಚಾಗಿ ಹರಿಯುವ ನೀರು ಪೋಲಾಗುತ್ತಿದ್ದು, ಅದರ ಬಳಕೆ ಆಗಬೇಕಾಗಿದೆ ಆದ್ದರಿಂದ ಮೇಕೆದಾಟು ಯೋಜನೆ ಅನುಮತಿ ನೀಡಿದರೆ ಅನುಕೂಲ ಆಗುತ್ತದೆ. ಹಾಗಾಗಿ ಮೇಕೆದಾಟು ಯೋಜನೆಗೆ ಅನುಮತಿ ಕೇಂದ್ರ ಸರ್ಕಾರ ನೀಡಬೇಕು ಎಂದರು.ಮಹಾರಾಷ್ಟ್ರ ರಾಜ್ಯದಲ್ಲಿ ದ್ವಿಭಾಷಾ ಸೂತ್ರ ಒಪ್ಪಿಕೊಂಡಿದೆ. ಅದರಂತೆ ಕರ್ನಾಟಕದಲ್ಲೂ ತ್ರಿಭಾಷಾ ಸೂತ್ರ ಒಪ್ಪಿಕೊಳ್ಳುತ್ತೀರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಮುಖ್ಯಮಂತ್ರಿಗಳು, “ನಾವು ದ್ವಿ- ಭಾಷಾ ಸೂತ್ರವನ್ನು ಒಪ್ಪಿಕೊಳ್ಳಲು ಬದ್ಧವಾಗಿದ್ದೇವೆ” ಎಂದರು.