ರೈತರಿಗೆ ನ್ಯಾನೋ ಟೆಕ್ನೋಲಾಜಿ ನೀಡಲು ಕೃಷಿ ಇಲಾಖೆ ಸಂಸಂಪೂರ್ಣ ವಿಫಲವಾಗಿದೆ. ರೈತರು ಬೆಳೆದ ಬೆಳೆಗೆ ಸೂಕ್ತವಾದ ಬೆಲೆ ನೀಡುವಂತ ಕೆಲಸ ಮಾಡಬೇಕು ಎಂದು ವಿಜಯಪುರದಲ್ಲಿ ರೈತ ಸಂಘಟನೆ ರಾಜ್ಯ ಅಧ್ಯಕ್ಷ ಮಾಲಿಪಾಟೀಲ್ ಒತ್ತಾಯಿಸಿದರು. ವಿಜಯಪುರ ನಗರದಲ್ಲಿ ಮಾದ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯ ಸರ್ಕಾರ ಕೃಷಿ ಇಲಾಖೆಯಲ್ಲಿ ಸಾಕಷ್ಟು ಬದಲಾವಣೆ ತರಬೇಕು, ರೈತರಿಗೆ ನ್ಯಾನೋ ಟೆಕ್ನೋಲಾಜಿ ಬಗ್ಗೆ ಮಾಹಿತಿ ನೀಡಬೇಕು ಹಾಗೂ ರೈತರು ಬೆಳೆದ ಬೆಳೆಗೆ ಸೂಕ್ತ ಬೆಲೆ ನೀಡುವಂತ ಕೆಲಸ ಮಾಡಬೇಕು ಎಂದು ಆಗ್ರಹಿಸಿದರು.