Bagalkot

ದೇವಿಗೆ ವಿಶೇಷ ಪೂಜೆ ಸಲ್ಲಿಸಿ ಆರ್ಶಿವಾದ

Share

ಪಕ್ಷ ಸಂಘಟನೆಗಾಗಿ ರಾಜ್ಯ ಪ್ರವಾಸ ಕೈಗೊಂಡಿರುವ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಗುರುವಾರ ಬಾಗಲಕೋಟೆ ಜಿಲ್ಲೆಯ ಬದಾಮಿ ತಾಲೂಕಿನ ಬನಶಂಕರಿ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ದೇವಿಯ ದರ್ಶನ ಹಾಗೂ ಆರ್ಶಿವಾದ ಪಡೆದುಕೊಂಡರು

ಬನಶಂಕರಿ ದೇವಸ್ಥಾನಕ್ಕೆ ಭೇಡಿ ನೀಡಿ ವಿಶೇಷ ಪೂಜೆ ಸಲ್ಲಿಸಿದ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರನ್ನು ದೇವಸ್ಥಾನದ ಅರ್ಚಕರು ದೇವಸ್ಥಾನದಿಂದ ಶಾಲು, ಹೂಮಾಲೆ ಹಾಕಿ ಸತ್ಕರಿಸಿದರು ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷರು, ಮುಖಂಡರು ನಿಖಿಲ್ ಕುಮಾರಸ್ವಾಮಿ ಅವರಿಗೆ ಸಾಥ ನೀಡಿದರು

ಬದಾಮಿ ಬನಶಶಂಕರಿ ದರ್ಶನ ಪಡೆದ ಬಳಿಕ ಅವರು ಗುಳೇದಗುಡ್ಡದ ಶಿವಯೋಗ ಮಂದಿರದಲ್ಲಿರುವ ಗುರುಸಿದ್ದೇಶ್ವರ ಮಠಕ್ಕೆ ಭೇಟಿ ನೀಡಲಿದ್ದಾರೆ. ಇದಾದ ಬಳಿಕ ಬಾದಾಮಿ ಪಟ್ಟಣದಲ್ಲಿ ಬೃಹತ್ ಜನಸಾಗರದೊಂದಿಗೆ ರ್ಯಾೇಲಿ ನಡೆಯಲಿದೆ. ಈ ರ್ಯಾ ಲಿ ಕಬ್ಬಲಗೇರಿ ಕ್ರಾಸ್ನಿಂದ ಆರಂಭವಾಗಿ ಕಾಳಿದಾಸ ಶಿಕ್ಷಣ ಸಂಸ್ಥೆಯವರೆಗೆ ಸಾಗಲಿದೆ. ನಂತರ ಬಾದಾಮಿ ಪಟ್ಟಣದ ವೀರಪುಲಿಕೇಶಿ ವಿದ್ಯಾಸಂಸ್ಥೆಯ ಮೈದಾನದಲ್ಲಿ ನಡೆಯಲಿರುವ ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ನಿಖಿಲ್ ಕುಮಾರಸ್ವಾಮಿ ಭಾಗವಹಿಸಲಿದ್ದಾರೆ. ಈ ಸಮಾವೇಶದಲ್ಲಿ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಅಧಿಕೃತ ಚಾಲನೆ ನೀಡಲ್ಲಿದ್ದಾರೆ

Tags:

error: Content is protected !!