ಅಪ್ರಾಪ್ತೆಯ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ 30 ವರ್ಷಗಳ ಕಠಿಣ ಕಾರಾಗೃಹವಾಸ ಶಿಕ್ಷೆ ವಿಧಿಸಿ ಮತ್ತು ನೊಂದ ಬಾಲಕಿಗೆ ₹4 ಲಕ್ಷ ರೂಪಾಯಿ ಪರಿಹಾರವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೂಲಕ ನೀಡುವಂತೆ ಬೆಳಗಾವಿ ಜಿಲ್ಲಾ ಪೋಸ್ಕೋ ನ್ಯಾಯಾಲಯವು ಆದೇಶಿಸಿದೆ.
ಖಾನಾಪೂರ ತಾಲ್ಲೂಕಿನ ನಂದಗಡ ಪೊಲೀಸ್ ಠಾಣಾ ವ್ಯಾಪ್ತಿಗೆ ಒಳಪಡುವ ಕಕ್ಕೇರಿ ಗ್ರಾಮದ ಕೃಷ್ಣಾ ಗಣಪತಿ ವಡ್ಡರ (23) ಎಂಬಾತನ ವಿರುದ್ಧ ಪೀಡಿತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇರೆಗೆ ಪೋಸ್ಕೊ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದ ವಿಚಾರಣೆಯ ನಂತರ, ದಿನಾಂಕ 23/07/2025 ರಂದು ಗೌರವಾನ್ವಿತ ಪೋಸ್ಕೊ ನ್ಯಾಯಾಲಯದ ನ್ಯಾಯಾಧೀಶರಾದ ಪುಷ್ಪಲತಾ ಅವರು, ಪೋಸ್ಕೊ ಕಾಯ್ದೆಯ ಕಲಂ 6ರ ಅಡಿಯಲ್ಲಿ ಆರೋಪಿಗೆ 30 ವರ್ಷಗಳ ಕಠಿಣ ಕಾರಾಗೃಹವಾಸ ಶಿಕ್ಷೆ ವಿಧಿಸಿದರು.
ಇದೇ ಪ್ರಕರಣದಲ್ಲಿ ನೊಂದ ಬಾಲಕಿಗೆ ₹4 ಲಕ್ಷ ರೂಪಾಯಿ ಪರಿಹಾರವನ್ನು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಮೂಲಕ ನೀಡುವಂತೆ ನ್ಯಾಯಾಧೀಶರು ಆದೇಶಿಸಿದರು.ಸಾರ್ವಜನಿಕ ಅಭಿಯೋಜಕ ಎಲ್.ವಿ. ಪಾಟೀಲ್ ಅವರು ತೀವ್ರವಾದ ವಾದ ಮಂಡಿಸಿ ನ್ಯಾಯಾಲಯದಿಂದ ನ್ಯಾಯೋಚಿತ ತೀರ್ಪು ತರುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಈ ಪ್ರಕರಣ ನಂದಗಡ ಪೊಲೀಸ್ ಠಾಣೆಯಲ್ಲಿ ದಾಖಲಾಗಿತ್ತು