ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಹೂಲಿಕಟ್ಟಿ ಗ್ರಾಮದ ಜನತಾ ಕಾಲನಿ ಸರ್ಕಾರಿ ಕಿರಿಯ ಪ್ರಾಥಮಿಕ ಕನ್ನಡ ಶಾಲೆ ಆವರಣದಲ್ಲಿರುವ ವಾಟರ್ ಟ್ಯಾಂಕ್ಗೆ ದುಷ್ಕರ್ಮಿಗಳಿಂದ ಕೀಟನಾಶಕ ಬೇರಿಸಿರೋ ಆರೋಪ ಕೇಳಿ ಬಂದಿದೆ. ಇದರಿಂದಾಗಿ 12 ಮಕ್ಕಳ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದೆ.
ಕೀಟನಾಶಕ ಮಿಶ್ರಿತ ನೀರು ಸೇವನೆ ಮಾಡ್ತಿದ್ದಂತೆ ಮಕ್ಕಳ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಇದರಿಂದಾಗಿ 12 ಜನ ಮಕ್ಕಳಿಗೆ ತಲೆಸುತ್ತು, ವಾಂತಿ ಹಿನ್ನೆಲೆ ಸವದತ್ತಿ ತಾಲೂಕಾ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಮಾಹಿತಿ ತಿಳಿಯುತ್ತಿದ್ದಂತೆ ಸವದತ್ತಿ ಆಸ್ಪತ್ರೆಗೆ ಬೆಳಗಾವಿ ಡಿಎಚ್ಒ ಈಶ್ವರ್ ಗಡಾದ್, ಡಿಡಿಪಿಐ ಲೀಲಾವತಿ ಹಿರೇಮಠ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಮಕ್ಕಳು ಆರೋಗ್ಯದಲ್ಲಿ ಸದ್ಯ ಚೇತರಿಕೆ ಕಂಡು ಬಂದಿದ್ದು, ಕೀಟನಾಶಕ ಬೇರಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಸವದತ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.