khanapur

ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘದ ಖಾನಾಪೂರ ಘಟಕದ ಅಧ್ಯಕ್ಷರಾಗಿ ಶಿವಾನಂದ ಕುಂದರಗಿ ಆಯ್ಕೆ

Share

ಕರ್ನಾಟಕ ರಾಜ್ಯ ನಿವೃತ್ತ ಸರಕಾರಿ ನೌಕರರ ಸಂಘದ ಖಾನಾಪೂರ ಘಟಕದ ನೂತನ ಅಧ್ಯಕ್ಷರಾಗಿ ಸರ್ಕಾರಿ ಉರ್ದು ಕಿರಿಯ ಪ್ರಾಥಮಿಕ ಶಾಲೆ ಗಾಂಧಿ ನಗರದಲ್ಲಿನ ನಿವೃತ್ತ ಶಿಕ್ಷಕರಾದ ಶಿವಾನಂದ ಕುಂದರಗಿ ಅವರನ್ನು ಆಯ್ಕೆ ಮಾಡಲಾಗಿದೆ.

ಈ ಆಯ್ಕೆ ಖಾನಾಪೂರ ಪಟ್ಟಣದ ಸಂತ ಜ್ಞಾನೇಶ್ವರ ಮಂದಿರದಲ್ಲಿ ನಡೆದ ಖಾನಾಪೂರ ತಾಲೂಕು ಹಿರಿಯ ನಾಗರಿಕರು ಹಾಗೂ ನಿವೃತ್ತ ನೌಕರರ ಸಭೆಯಲ್ಲಿ ನಡೆಯಿತು. ಈ ಸಭೆಯನ್ನು ಸಿ.ಎಮ್. ಪವಾರ ಮತ್ತು ವಿ.ಎಂ. ಬನೋಶಿ ಅವರ ಸೂಚನೆಯಂತೆ, ಜಿಲ್ಲಾ ಘಟಕದ ಅಧ್ಯಕ್ಷರಾದ ಎಸ್.ಬಿ. ಸಿದ್ನಾಳ ಅವರು ಸಂಘದ ಬೈ ಲಾ ಪ್ರಕಾರ ಪದಾಧಿಕಾರಿಗಳ ಆಯ್ಕೆ ಮಾಡಿದರು.

ಈ ಸಂದರ್ಭದಲ್ಲಿ ನಿವೃತ್ತ ಸರಕಾರಿ ನೌಕರರ ಸಂಘದ ಅನೇಕ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು. ಅಲ್ಲದೆ, ಪಟ್ಟಣ ಪಂಚಾಯಿತಿ ಸದಸ್ಯೆ ಮೇಘಾ ಕುಂದರಗಿ ಹಾಗೂ ಹಲವಾರು ಗಣ್ಯರು ಕೂಡ ಸಭೆಯಲ್ಲಿ ಭಾಗವಹಿಸಿದ್ದರು. ಉಳಿದ ಪದಾಧಿಕಾರಿಗಳ ಆಯ್ಕೆಯು ಸಹ ಸೌಹಾರ್ದಪೂರ್ವಕವಾಗಿ ನಡೆಯಿತು.

Tags:

error: Content is protected !!