Vijaypura

ತನ್ನದೇ ಜಮೀನಿನಲ್ಲಿ ನೇಣಿಗೆ ಶರಣಾದ ಅನ್ನದಾತ

Share

ಅನ್ನದಾತ ಸಾಲ ಬಾಧೆಯಿಂದ ನೇಣಿಗೆ ಶರಣಾಗಿರುವ ಘಟನೆ ವಿಜಯಪುರ ಜಿಲ್ಲೆ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದಲ್ಲಿ ನಡೆದಿದೆ. ಶಿವಾಜಿ ಘೋಲಫ (56) ನೇಣಿಗೆ ಶರಣಾದ ರೈತನಾಗಿದ್ದಾನೆ. ಕೆಬಿಜಿ ಬ್ಯಾಂಕ್ ನಲ್ಲಿ ಮೂರು ಲಕ್ಷ ಸಾಲ ಹಾಗೂ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಸಾಲ ಮಾಡಿದ್ದ, ಇನ್ನೂ ಖಾಸಗಿಯಾಗಿಯೂ ಸಾಲ ಮಾಡಿದ್ದ ಶಿವಾಜಿ ತನ್ನದೇ ಜಮೀನಿನ ಮರಕ್ಕೆ ನೇಣು ಹಾಕಿಕೊಂಡಿದ್ದಾನೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು. ಬಬಲೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

error: Content is protected !!