ಬಿಜೆಪಿ ರಾಜಕೀಯವಾಗಿ ಯಾತ್ರೆ ಮಾಡುತ್ತಿದೆ, ಮಾಡಲಿ ಬಿಡಿ. ಅವರಿಗೆ ಇದರಿಂದ ರಾಜಕೀಯ ಲಾಭ ಸಿಗಲ್ಲ. ಎಸ್ಐಟಿ ಆದಾಗ ಯಾಕೆ ಬಿಜೆಪಿ ಅವರು ಯಾತ್ರೆ ಮಾಡಲಿಲ್ಲ? ಇದು ಡೋಂಗಿತನ ಅಲ್ವಾ? ಎಂದು ಬಿಜೆಪಿಯವರ ಧರ್ಮಸ್ಥಳ ಯಾತ್ರೆ ಕುರಿತು ಸಿಎಂ ಸಿದ್ದರಾಮಯ್ಯ ಅವರು ಪ್ರಶ್ನಿಸಿದ್ದಾರೆ.
ಮೈಸೂರಿನ ತವರೂರು ಸಿದ್ದರಾಮನ ಹುಂಡಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿಯಿಂದ ಚಾಮುಂಡಿ ಚಲೋ ವಿಚಾರವಾಗಿ ಪ್ರತಿಕ್ರಿಯಿಸಿದರು. ಹಿಂದುತ್ವ ಗಟ್ಟಿ ಆಗುತ್ತೆ ಎಂದು ಬಿಜೆಪಿ ಈ ಯಾತ್ರೆಗಳ ಪ್ಲಾನ್ ಮಾಡುತ್ತಿದೆ. ಇವರಿಂದ ಹಿಂದುತ್ವ ಗಟ್ಟಿಯಾಗಲ್ಲ. ನಾನು ಕೂಡ ಹಿಂದೂ, ನಾವೆಲ್ಲರೂ ಕೂಡ ಹಿಂದೂ, ನಾನು ನಮ್ಮ ಊರಲ್ಲಿ ರಾಮ ಮಂದಿರ ಕಟ್ಟಿಸಿದ್ದೇನೆ. ಹಿಂದೂಗಳು ಎಂದರೆ ಸುಳ್ಳು ಹೇಳುವುದು, ಅಪಪ್ರಚಾರ ಮಾಡುವುದಲ್ಲ, ಮನುಷ್ಯತ್ವ ಇರುವವರು ಹಿಂದೂಗಳು. ಅಮಾನವೀಯ ನಡವಳಿಕೆ ತೋರುವವರು ಹಿಂದೂಗಳಲ್ಲ ಎಂದರು. ಬಿಜೆಪಿ ಅವರು ದಸರಾದಲ್ಲೂ ರಾಜಕೀಯ ಮಾಡುತ್ತಿದ್ದಾರೆ. ಅವರ ಮನೆನೂ ರಾಜಕೀಯಕ್ಕೆ ಬೇಕಾದರೆ ಬಳಸಿ ಕೊಳ್ಳುತ್ತಾರೆ. ಸುಳ್ಳು ಹೇಳುವುದು ಬಿಟ್ಟು ಬಿಜೆಪಿಗೆ ಏನು ಗೊತ್ತು? ಬಿಜೆಪಿ ಹೋರಾಟದಿಂದ ದಸರಾ ಮೇಲೆ ಕೆಟ್ಟ ಪರಿಣಾಮ ಬೀರಲ್ಲ. ಹಿಂದೂಗಳೆಲ್ಲಾ ಬಿಜೆಪಿ ಜೊತೆ ಇಲ್ಲ ಎಂದು ಸಿಎಂ ಹೇಳಿದರು.
ಚಾಮುಂಡಿ ಬೆಟ್ಟ ಹಿಂದೂಗಳದ್ದಲ್ಲ ಎಂಬ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಹೇಳಿಕೆಗೆ ಸಿಎಂ ಮೊದಲ ಪ್ರತಿಕ್ರಿಯೆ ನೀಡಿದ್ದು, ಚಾಮುಂಡಿ ಬೆಟ್ಟ ಹಿಂದೂಗಳ ಆಸ್ತಿನೇ ಇರಬಹುದು. ಈಗ ವಿಚಾರ ಇರುವುದು ದಸರಾ. ಚಾಮುಂಡಿ ಬೆಟ್ಟದ್ದು ಅಲ್ಲ. ದಸರಾ ನಾಡಹಬ್ಬ, ನಾಡಹಬ್ಬ ಎಲ್ಲರಿಗೂ ಸೇರಿದ್ದು. ಡಿ. ಕೆ. ಶಿವಕುಮಾರ್ ಹೇಳಿದ್ದು ನನಗೆ ಗೊತ್ತಿಲ್ಲ. ದಸರಾ ವಿಚಾರದ ಬಗ್ಗೆ ಮಾತ್ರ ಈಗ ಚರ್ಚೆಯಲ್ಲಿ ಇದೆ. ಚಾಮುಂಡಿ ಬೆಟ್ಟದ್ದು ಅಲ್ಲ ಎಂದು ತಿಳಿಸಿದರು. ಬೈಟ್
ನನ್ನ ಸ್ವಗ್ರಾಮದಲ್ಲಿ ನಾನು ಐದರಿಂದ ಏಳನೇ ತರಗತಿಯಲ್ಲಿ ಓದಿದ ಶಾಲೆಗೆ ಹೊಸ ಕಟ್ಟಡ ಕಟ್ಟಿಸಿದ್ದೇನೆ. ಈ ಊರಿಗೆ ಪ್ರಾಥಮಿಕ ಶಾಲೆ, ಹೈಸ್ಕೂಲ್, ಪಿಯು ಕಾಲೇಜ್ ಆಗಿದೆ. ವಿದ್ಯಾರ್ಥಿಗಳು ಸಿಗಲ್ಲ ಅಂತಾ ಡಿಗ್ರಿ ಕಾಲೇಜ್ ಮಾತ್ರ ಮಾಡಿಲ್ಲ. ಎಲ್ಲಾ ರೀತಿಯ ವೈದ್ಯಕೀಯ ಸೇವೆ ಕಲ್ಪಿಸಿದ್ದೇನೆ. ಊರಿನ ಋಣ ಯಾವಾಗಲೂ ಇದ್ದೇ ಇರುತ್ತದೆ. ಅದು ಯಾವಾಗಲೂ ಮುಗಿಯದ ಋಣ ಎಂದರು
