bagalkot

ಬಾಗಲಕೋಟೆಯಲ್ಲಿ ಮಾಲಿನ್ಯ ನಿಯಂತ್ರಣ ಮಂಡಳಿಯ ಅದ್ದೂರಿ ೫೦ನೇ ವರ್ಷದ ಸುವರ್ಣ ಮಹೋತ್ಸವ

Share

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಗೆ ೫೦ ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ, ಬಾಗಲಕೋಟೆಯಲ್ಲಿ ಮಂಡಳಿಯ ಸುವರ್ಣ ಮಹೋತ್ಸವ ಕಾರ್ಯಕ್ರಮಕ್ಕೆ ಅದ್ದೂರಿ ಚಾಲನೆ ದೊರೆತಿದೆ.

ತೋಟಗಾರಿಕಾ ವಿಶ್ವವಿದ್ಯಾಲಯದ ಪಕ್ಕದ ಸೆಕ್ಟರ್ ನಂಬರ್ ೧೧೦ ಮತ್ತು ೧೧೨ ರಲ್ಲಿ ಬೃಹತ್ ವೇದಿಕೆಯಲ್ಲಿ ಈ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಶ್ರೀ ನರೇಂದ್ರ ಪಿ. ಎಂ. ನರೇಂದ್ರಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪರಿಸರ ಸಂರಕ್ಷಣೆ ಕುರಿತು ಜಾಗೃತಿ ಮೂಡಿಸುವ ಉದ್ದೇಶವಿದೆ.

ಸುವರ್ಣ ಮಹೋತ್ಸವದ ಪ್ರಯುಕ್ತ ನಡೆದ ಈ ಕಾರ್ಯಕ್ರಮಕ್ಕೆ ವಿವಿಧ ಶಾಲಾ-ಕಾಲೇಜುಗಳ ವಿದ್ಯಾರ್ಥಿಗಳು, ಪೌರಕಾರ್ಮಿಕರು ಮತ್ತು ಸಾರ್ವಜನಿಕರು ಉತ್ಸಾಹದಿಂದ ಭಾಗವಹಿಸಿದರು. ಕಾರ್ಯಕ್ರಮವು ಆರಂಭವಾಗುವುದಕ್ಕೆ ಮುನ್ನವೇ, ಸ್ಥಳೀಯ ಕಲಾತಂಡಗಳು ಪ್ರದರ್ಶಿಸಿದ ಡೊಳ್ಳು ಕುಣಿತವು ನೆರೆದಿದ್ದ ಜನರ ಗಮನ ಸೆಳೆದು ಸಂಭ್ರಮದ ವಾತಾವರಣವನ್ನು ಸೃಷ್ಟಿಸಿತು.

ಈ ಸಂದರ್ಭದಲ್ಲಿ ಮಂಡಳಿಯ ಕಳೆದ ಐದು ದಶಕಗಳ ಸಾಧನೆ ಮತ್ತು ಮುಂದಿನ ಪರಿಸರ ಸಂರಕ್ಷಣಾ ಯೋಜನೆಗಳ ಕುರಿತು ಪ್ರಮುಖ ಘೋಷಣೆಗಳು ಹೊರಬೀಳುವ ನಿರೀಕ್ಷೆಯಿದೆ.

Tags:

error: Content is protected !!