ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಸಫಾಯಿ ಕರ್ಮಚಾರಿಗಳ ಘಟಕದ ಬೆಳಗಾವಿ ಜಿಲ್ಲಾ (ಗ್ರಾಮೀಣ) ಅಧ್ಯಕ್ಷರನ್ನಾಗಿ ರಾಜು ಗಂಗಾ ಸಾಖೆ ಅವರನ್ನು ನೇಮಕ ಮಾಡಲಾಗಿದೆ.

ಕೆಪಿಸಿಸಿ ಅಧ್ಯಕ್ಷರ ಅನುಮೋದನೆಯ ಮೇರೆಗೆ, ರಾಜ್ಯ ಘಟಕದ ಅಧ್ಯಕ್ಷರಾದ ಮುರಳಿ ಅಶೋಕ್ ಸಾಲಪ್ಪ ಅವರು ಈ ನೇಮಕಾತಿ ಆದೇಶವನ್ನು ಹೊರಡಿಸಿದ್ದಾರೆ. ರಾಜು ಗಂಗಾ ಸಾಖೆ (ಬಿನ್ ಗಂಗಣ್ಣ) ಅವರು ತಕ್ಷಣದಿಂದ ಜಾರಿಗೆ ಬರುವಂತೆ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಜಿಲ್ಲೆಯ ಸಫಾಯಿ ಕರ್ಮಚಾರಿಗಳ ಶ್ರೇಯೋಭಿವೃದ್ಧಿಗಾಗಿ ಮತ್ತು ಪಕ್ಷದ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗೂ ರಾಜ್ಯ ನಾಯಕರ ಮಾರ್ಗದರ್ಶನದಲ್ಲಿ ಪಕ್ಷವನ್ನು ತಳಮಟ್ಟದಿಂದ ಬಲಪಡಿಸುವುದು. ಕೆಪಿಸಿಸಿ ಸೂಚನೆಯಂತೆ ಪಕ್ಷದ ಸಿದ್ಧಾಂತಗಳನ್ನು ಮನೆಮನೆಗೆ ತಲುಪಿಸುವ ಜವಾಬ್ದಾರಿಯನ್ನು ನೀಡಲಾಗಿದೆ.
