ಮಾಜಿ ಕೇಂದ್ರ ಸಚಿವರು,ಶಾಸಕರಾದ ಬಸನಗೌಡ ಪಾಟೀಲ ಯತ್ನಾಳರವರು, ವಿಜಯಪುರ ನಗರದ ಅಟಲ್ ಬಿಹಾರಿ ವಾಜಪೇಯಿ ವೃತ್ತದಲ್ಲಿ ಇಂದು ದೇಶದ ಹೆಮ್ಮೆಯ ಮಾಜಿ ಪ್ರಧಾನಮಂತ್ರಿ, ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ, ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಗೌರವಭಾವದಿಂದ ನಮನ ಸಲ್ಲಿಸಿದರು.


ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯರು, ಮುಖಂಡರು, ಹಿಂದೂ ಕಾರ್ಯಕರ್ತರು, ಅಭಿಮಾನಿಗಳು, ಹಿತೈಷಿಗಳು, ಗಣ್ಯರು, ವ್ಯಾಪಾರಸ್ಥರು ಹಾಗೂ ನಗರ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

