ಚಾಲಕ ನಿಯಂತ್ರಣ ತಪ್ಪಿ ಕಾರವೊಂದು ಪಲ್ಟಿಯಾದ ಘಟನೆ ಧಾರವಾಡ ಹೊರವಲಯದ ರಾಷ್ಟ್ರೀಯ ಹೆದ್ದಾರಿಯ ಯರಿಕೊಪ್ಪ ಬಳಿ ಸಂಭವಿಸಿದ್ದು, ಐವರು ಪ್ರಾಣಪಾಯದಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬಾರಿ ಅನಾಹುತವೊಂದ ತಪ್ಪಿದಂತಾಗಿದೆ.


ವೈ- ಧಾರವಾಡ ತಾಲೂಕಿನ ಯರಿಕೊಪ್ಪ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದೆ. ಅದೃಷ್ಟವಶಾತ್ ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದು, ಕಾರಿನಲ್ಲಿ ಸಿಲುಕಿದವರನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ. ಸದ್ಯ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪೊಲೀಸರ ಪ್ರಾಥಮಿಕ ತನಿಖೆಯ ಬಳಿಕ ಗಾಯಾಳುಗಳ ಹೆಸರು ಮೂಲ ತಿಳಿದು ಬರಬೇಕಾಗಿದೆ.
