ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಅವರ ತಾಯಿ ಗಂಗಾಬಾಯಿ ಸಿದ್ಧರಾಮಪ್ಪ ಪಾಟೀಲ (84) ಅವರು ವಯೋಸಹಜವಾಗಿ ಭಾನುವಾರ ಬೆಳಿಗ್ಗೆ ನಿಧರಾಗಿದ್ದಾರೆ. ಮೃತರ ಮಕ್ಕಳಾದ ಮಹಾದೇವಿ ಪಾಟೀಲ, ಶಿವಶರಣಗೌಡ ಪಾಟೀಲ, ಶಿವಾನಂದ ಪಾಟೀಲ ಹಾಗೂ ವಿಜುಗೌಡ ಪಾಟೀಲ ಸೇರಿದಂತೆ ಮೊಮ್ಮಕ್ಕಳು ಹಾಗೂ ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ.ಮೃತರ ಅಂತ್ಯ ಕ್ರಿಯೆ ಭಾನುವಾರ ಸಂಜೆ 4-30 ಗಂಟೆಗೆ ವಿಜಯಪುರ ನಗರದ ಜಮಖಂಡಿ ರಸ್ತೆಯಲ್ಲಿರುವ ತೋಟದಲ್ಲಿ ನೆರವೇರಲಿದೆ.

