ಖಾನಾಪೂರದ ಮಾಜಿ ಶಾಸಕಿ ಹಾಗೂ ಎಐಸಿಸಿ (AICC) ಕಾರ್ಯದರ್ಶಿಯಾಗಿರುವ ಡಾ. ಅಂಜಲಿ ನಿಂಬಾಳ್ಕರ್ ಅವರು, ನವದೆಹಲಿಯ ಎಐಸಿಸಿ ಕಛೇರಿಯಲ್ಲಿ ಗೋವಾ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ವಿಷಯಗಳ ಕುರಿತು ಪಕ್ಷದ ಹಿರಿಯ ಮುಖಂಡರೊಂದಿಗೆ ಮಹತ್ವದ ಚರ್ಚೆ ನಡೆಸಿದರು.

ಈ ಸಭೆಯಲ್ಲಿ ಗೋವಾ ರಾಜ್ಯದಲ್ಲಿ ಪಕ್ಷವನ್ನು ಸಂಘಟಿಸುವ ಕುರಿತಂತೆ ಕೆಲವು ಪ್ರಮುಖ ಸಲಹೆ-ಸೂಚನೆಗಳನ್ನು ನೀಡಲಾಗಿದ್ದು, ಅವುಗಳನ್ನು ಅನುಷ್ಠಾನಗೊಳಿಸಿ ಪಕ್ಷವನ್ನು ಬಲಪಡಿಸಲು ತಾವು ಸಜ್ಜಾಗಿರುವುದಾಗಿ ಡಾ. ಅಂಜಲಿ ನಿಂಬಾಳ್ಕರ್ ತಿಳಿಸಿದರು. ಈ ಸಂದರ್ಭದಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್, ಸಂಸದ ಸೆಂಥಿಲ್ ಕುಮಾರ್ ಮತ್ತು ವಂಶಿಚಂದ್ ರೆಡ್ಡಿ ಅವರು ಉಪಸ್ಥಿತರಿದ್ದರು
