ತಾಂಡವಪುರ ಮಾರ್ಚ್ 12 ಆಲಂಬೂರು ಗ್ರಾಮದ ಸ್ಮಶಾನಕ್ಕೆ ಹೋಗುವ ರಸ್ತೆ ಮತ್ತು ಸ್ಮಶಾನ ಅಭಿವೃದ್ಧಿಗೆ ಹಾಗೂ ಗ್ರಾಮದ ಇನ್ನೂ ಹಲವಾರು ಸಮಸ್ಯೆಗಳಿಗೆ ಗ್ರಾಮಸ್ಥರ ಮನವಿಗೆ ಸ್ಪಂದಿಸಿ ಕ್ರಮ ಕೈಗೊಳ್ಳಿ ಎಂದು ಅಧಿಕಾರಿಗಳಿಗೆ ವಿಧಾನ ಪರಿಷತ್ ಸದಸ್ಯ ಹಾಗೂ ವರುಣ ವಿಧಾನಸಭಾ ಕ್ಷೇತ್ರದ ಆಶ್ರಯ ಸಮಿತಿಯ ಅಧ್ಯಕ್ಷರಾದ ಡಾಕ್ಟರ್ ಯತೀಂದ್ರ ಸಿದ್ರಾಮಯ್ಯನವರು ಸೂಚನೆ ನೀಡಿದರು


ಅವರು ನಂಜನಗೂಡು ತಾಲೂಕು, ವರುಣ ವಿಧಾನಸಭಾ ಕ್ಷೇತ್ರಕ್ಕೆ ಸೇರುವ ಆಲಂಬೂರು ಗ್ರಾಮದಲ್ಲಿ ತಾಲೂಕು ಪಂಚಾಯಿತಿ ಗ್ರಾಮ ಪಂಚಾಯತಿ ವತಿಯಿಂದ ಹಮ್ಮಿಕೊಂಡಿದ್ದ ಸಾರ್ವಜನಿಕರ ಕುಂದು ಕೊರತೆ ಸಭೆಯಲ್ಲಿ ಡಾಕ್ಟರ್ ಯತೀಂದ್ರ ಸಿದ್ರಾಮಯ್ಯನವರು ಭಾಗವಹಿಸಿ ಸಭೆಯಲ್ಲಿ ಸಾರ್ವಜನಿಕರ ಕುಂದು ಕೊರತೆ ಸಮಸ್ಯೆಗಳನ್ನು ಆಲಿಸಿ ಸ್ಥಳದಲ್ಲಿ ಕರೆದು ಸಣ್ಣ ಪುಟ್ಟ ಸಮಸ್ಯೆಗಳಿಗೆ ಸ್ಥಳದಲ್ಲಿ ಪರಿಹಾರ ದೊರಕಿಸಿಕೊಟ್ಟರು ಬುಳಿಕ ಮಾತಾಡಿದ ಅವರು ಗ್ರಾಮದಲ್ಲಿ ಹಲವಾರು ಸಮಸ್ಯೆಗಳನ್ನು ನಾವು ಸಾರ್ವಜನಿಕರ ಸಮಸ್ಯೆಗಳನ್ನು ಹಾಲಿಸಲು ಬಂದಾಗ ನಮ್ಮ ಗಮನಕ್ಕೆ ತಂದಿರಿ ಎಲ್ಲಾ ಸಮಸ್ಯೆಗಳನ್ನು ಅಂತವಾಗಿ ಬಗೆಹರಿಸಲು ಕ್ರಮ ಕೈಗೊಳ್ಳಲಾಗಿದೆ ಗ್ರಾಮಸ್ಥರ ಬೇಡಿಕೆಯಂತೆ ಗ್ರಾಮದ ದೇವಸ್ಥಾನಕ್ಕೆ ಅನುದಾನ ದೊರಕಿಸಿಕೊಡುವುದು ಮತ್ತು ಗ್ರಾಮದ ಸ್ಮಶಾನಕ್ಕೆ ಹೋಗುವ ರಸ್ತೆ ಮತ್ತು ಸ್ಮಶಾನ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕೆದು ಬೇಡಿಕೆ ಇಟ್ಟಿದ್ದೀರಿ ನಿಮ್ಮ ಈ ಎಲ್ಲ ಬೇಡಿಕೆಗಳನ್ನು ಸಮಸ್ಯೆಗಳನ್ನು ಬಗೆಹರಿಸಲು ಕ್ರಮ ಕೈಗೊಳ್ಳಲಾಗಿದೆ ಈಗಾಗಲೇ ಸ್ಮಶಾನಕ್ಕೆ ಹೋಗುವ ರಸ್ತೆ ಮತ್ತು ಸ್ಮಶಾನ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ ಈ ಬಗ್ಗೆ ಅಧಿಕಾರಿಗಳಿಗೂ ಸಹ ಸೂಚನೆ ನೀಡಿದ್ದೇನೆ ಎಂದು ಹೇಳಿದರು
ಅಲ್ಲದೆ ನಮ್ಮ ವರುಣ ಕ್ಷೇತ್ರದಲ್ಲಿ ಶೈಕ್ಷಣಿಕ ಪ್ರಗತಿಗೆ ಹೆಚ್ಚು ಒತ್ತು ಕೊಡುವ ನಿಟ್ಟಿನಲ್ಲಿ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಲು ಪ್ರತಿ ಗ್ರಾಮ ಪಂಚಾಯತಿಯಲ್ಲಿ 10ನೇ ತರಗತಿಯಲ್ಲಿ ಹೆಚ್ಚು ಅಂಕ ಗಳಿಸಿದ ಮೂವರು ವಿದ್ಯಾರ್ಥಿಗಳಿಗೆ ಪ್ರತಿಯೊಬ್ಬರಿಗೂ ನಮ್ಮ ಸ್ವಂತ ಹಣದಿಂದ 10,000 ರೂಗಳ ಧನ ಸಹಾಯವನ್ನು ನೀಡುವ ಮೂಲಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿ ಗೌರವಿಸಲಾಗುತ್ತಿದ್ದು ವಿದ್ಯಾರ್ಥಿಗಳು ಇದೇ ರೀತಿ ಪ್ರತಿ ಗ್ರಾಮದಲ್ಲೂ ಉತ್ತಮ ಶಿಕ್ಷಣ ಪಡೆದು ಹೆಚ್ಚು ಅಂಕ ಗಳಿಸ ಇದೇ ರೀತಿ ಶೈಕ್ಷಣಿಕ ಪ್ರಗತಿಯಲ್ಲಿ ಮುಂದೆ ಸಾಗಿ ಎಂದು ವಿದ್ಯಾರ್ಥಿಗಳಿಗೆ ಇದೇ ಸಂದರ್ಭದಲ್ಲಿ ಸಲಹೆ ನೀಡಿದರು
ಈ ಸಂದರ್ಭದಲ್ಲಿ ರಾಜ್ಯ ವಾಲ್ಮೀಕಿ ಅಭಿವೃದ್ಧಿ ನಿಗಮದ ಮಾಜಿ ಅಧ್ಯಕ್ಷ ಎಸ್ ಸಿ ಬಸವರಾಜು ರಾಜ್ಯ ಮೃಗಾಲಯ ಪ್ರಾಧಿಕಾರದ ಅಧ್ಯಕ್ಷ ರಂಗಸ್ವಾಮಿ ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಲತಾ ಸಿದ್ದಶೆಟ್ಟಿ ಡಾ. ಯತೀಂದ್ರ ಸಿದ್ದರಾಮಯ್ಯ ಅಭಿಮಾನಿ ಬಳಗದ ಗೌರವಾಧ್ಯಕ್ಷ ಚಿನಂಬಳ್ಳಿ ಸಿಆರ್ ಮಹದೇವ್ ಮುಖ್ಯಮಂತ್ರಿಗಳ ವಿಶೇಷ ಅಧಿಕಾರಿ ವಿಜಯಕುಮಾರ್ ಆಪ್ತ ಸಹಾಯಕರಾದ ಶಿವ ಸ್ವಾಮಿ ಪ್ರದೀಪ್ ಕುಮಾರ್ ಮೈಸೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳು ಹಾಗೂ ವಕೀಲರು ಆದ ಎಂಸಿ ಹುಂಡಿ ಶಿವಪ್ರಸಾದ್ ಗ್ರಾಮದ ಯುವ ಮುಖಂಡ ಮೋಹನ್ ನಗರ್ಲೆ ನಾರಾಯಣ ನಾಯಕ ಮನು ಮೂರ್ತಿ ಬಿಳಿಗೆರೆ ರವಿ ಗುಂಡಪ್ಪ ತಗಡೂರು ಮುದ್ದು ಮಾದೇಗೌಡ ಗಾರ್ಡನ್ ಮಹೇಶ್ ಎಂ ದಕ್ಷಿಣ ಮೂರ್ತಿ ಎಪಿಎಂಸಿ ಮಾಜಿ ಉಪಾಧ್ಯಕ್ಷ ಆರ್ ಮಹದೇವ್, ರಂಗಸ್ವಾಮಿ ಸೇರಿದಂತೆ ಇನ್ನು ಹಲವಾರು ಮುಖಂಡರುಗಳು ಗ್ರಾಮದ ಯಜಮಾನರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಸಾರ್ವಜನಿಕರು ಹಾಜರಿದ್ದರು
