Dharwad

ಧಾರವಾಡದಲ್ಲಿ ಸ್ನೇಹಿತನ ಮದುವೆ ಮುಗಿಸಿ ಮರಳು ವೇಳೆ ಬೈಕ್ ಅಪಘಾತ, ಓರ್ವ ಸಾವು ಮತ್ತೊಓರ್ವನಿಗೆ ಗಂಭೀರ ಗಾಯ

Share

ಸ್ನೇಹಿತನ ಮದುವೆ ಮುಗಿಸಿಕೊಂಡು ಬೈಕ್‌ನಲ್ಲಿ ಬರುವಾಗ ಸಂಭವಿಸಿದ ಅಪಘಾತದಲ್ಲಿ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ಧಾರವಾಡದ ಜರ್ಮನ್ ಆಸ್ಪತ್ರೆಯ ಸರ್ಕಲ್ ಬಳಿ ಶನಿವಾರ ಸಂಜೆ ನಡೆದಿದೆ.

ಕಾರು ಹಾಗೂ ಬೈಕ್‌ ಮಧ್ಯೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದ್ದು, ಇನ್ನು ಕಾರು ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ ಎಂದು ತಿಳಿದುಬಂದಿದೆ. ರಾಣೆಬೆನ್ನೂರು ಮೂಲದ ನಿವಾಸಿ ಬಸವರಾಜ ಕಲ್ಲೆರಪ್ಪನವರ ಅಪಘಾತದಲ್ಲಿ ಮೃತಪಟ್ಟ ದುರ್ದೈವಿ ಎಂದು ಗುರುತಿಸಲಾಗಿದೆ. ಇನ್ನು ಸ್ಥಳಕ್ಕೆ ಆಗಮಿಸಿದ ಧಾರವಾಡ ಸಂಚಾರಿ ಪೊಲೀಸರು ಘಟನೆ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ.

Tags:

error: Content is protected !!