ಅಕಾಲಿಕ ಮಳೆ ಸುರಿದು ಸಿಡಿಲು ಬಡಿದ ಪರಿಣಾಮವಾಗಿ ಸಿಡಿಲು ಬಡಿದು ಎತ್ತು ಸಾವನ್ನಪ್ಪಿದ ದುರ್ಘಟನೆ ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ನಾಗಾವಿ ಕೆಡಿ ಗ್ರಾಮದಲ್ಲಿ ನಡೆದಿದೆ. ನಿನ್ನೆ ರಾತ್ರಿ ಅಕಾಲಿಕ ಮಳೆ ಸುರಿದು ಸಿಡಿಲು ಬಡಿದ ಪರಿಣಾಮ ಶ್ರೀಶೈಲ ಭೀಮರಾವ್ ಬಿರಾದಾರ ಎಂಬುವರ ಎತ್ತು ಸ್ಥಳದಲ್ಲಿಯೇ ಸಾವನ್ನಪ್ಪಿದೆ. ಜಮೀನಿನಲ್ಲಿ ಕಟ್ಟಿದ್ದ ಎತ್ತು ಸಿಡಿಲಿಗೆ ಬಲಿಯಾದ ಘಟನೆ ನಡೆದಿದೆ. ಈ ಸಂಬಂಧ ಪಶು ಸಂಗೋಪನೆ ಇಲಾಖೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

