ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ರಸ್ತೆಯ ಬದಿಯಲ್ಲಿ ತರಕಾರಿ ಮಾರಾಟ ಮಾಡುತ್ತಿದ್ದ ಮಾರಾಟಗಾರರಿಗೆ ಪೊಲೀಸ್ ಅಧಿಕಾರಿಗಳು ಖಡಕ್ ಎಚ್ಚರಿಕೆ ನೀಡಿದ್ದಾರೆ. ಸಂಚಾರಕ್ಕೆ ಅಡ್ಡಿಯಾಗದಂತೆ ಲಕ್ಷ್ಮಣ ರೇಖೆ ಹಾಕಿಸಿ, ಅದರ ಒಳಗಡೆಯೇ ಮಾರಾಟ ಮಾಡುವಂತೆ ಸೂಚನೆ ನೀಡಿದ್ದಾರೆ. ನಿಯಮ ಉಲ್ಲಂಘಿಸಿದರೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದರು.

