ವಿಜಯಪುರ ನಗರದ ಬಸವೇಶ್ವರ ಸರ್ಕಲ್ನಿಂದ ಸೆಂಟ್ರಲ್ ಬಸ್ ಸ್ಟ್ಯಾಂಡ್ಗೆ ಹೋಗುವ ಮಾರ್ಗದಲ್ಲಿರುವ ಗ್ರೀಮ್ ಲ್ಯಾಂಡ್ ಟಾಕೀಸ್ ಬಳಿ ಭಾನುವಾರ ರಾತ್ರಿ ಖಾಸಗಿ ಬಸ್ ಢಿಕ್ಕಿ ಹೊಡೆದು ಪಾದಚಾರಿ ಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ನಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ವ್ಯಕ್ತಿಯ ಗುರುತು ಪತ್ತೆಯಾಗಿಲ್ಲ. ಸ್ಥಳೀಯರು ಮತ್ತು ಪ್ರಯಾಣಿಕರಿಂದ ಮಾಹಿತಿ ಸಂಗ್ರಹಿಸಲಾಗುತ್ತಿದ್ದು, ಹೆಚ್ಚಿನ ವಿವರಗಳು ಪೊಲೀಸ್ ತನಿಖೆಯ ನಂತರ ತಿಳಿಯಲಿವೆ.

